• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ಗಾಂಧಿ ಮುಖಂಡನಾಗಲು ಅರ್ಹನಲ್ಲ: ಹಾರ್ದಿಕ್ ಪಟೇಲ್

TNN Correspondent Posted On February 24, 2018


  • Share On Facebook
  • Tweet It

ದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಜತೆ ಕೈ ಜೋಡಿಸಿ ಶತಾಯ ಗತಾಯ ಬಿಜೆಪಿಯನ್ನು ಸೋಲಿಸಲು ಯತ್ನಿಸಿದ ಪಾಟೀದಾರ್ ಅನಾಮತ್ ಆಂದೋಲನದ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಇದೀಗ ರಾಹುಲ್ ಗಾಂಧಿವಿರುದ್ಧ ತಿರುಗಿ ಬಿದ್ದಿದ್ದಾರೆ.

ರಾಹುಲ್ ಗಾಂಧಿ ಅವರನ್ನು ನಾನು ಮುಖಂಡನನ್ನಾಗಿ ಸ್ವೀಕರಿಸುವುದಿಲ್ಲ. ವೈಯಕ್ತಿಕವಾಗಿ ರಾಹುಲ್ ಗಾಂಧಿ ಅವರನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ರಾಹುಲ್ ಗಾಂಧಿ ಅವರಿಗೆ ನಾಯಕತ್ವದ ಗುಣಗಳ ಸಮಸ್ಯೆಯಿದೆ ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಬದಲು ಸೋನಿಯಾ ಪುತ್ರಿ, ವಾದ್ರಾ ಪತ್ನಿ ಪ್ರಿಯಾಂಕ್ ಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಭಯಸುತ್ತೇನೆ ಎಂದು ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರು ಹೆಚ್ಚಿನ ಮತಗಳನ್ನು ಸಹಾಯ ಮಾಡಿದ್ದ ಹಾರ್ದಿಕ ಪಟೇಲ್ ಇದೀಗ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ನ್ನೆ ಪ್ರಶ್ನಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಜುಗರ ಉಂಟು ಮಾಡಿದೆ. ಅಲ್ಲದೇ ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತಿರುವುದು ಮತ್ತು ರಾಹುಲ್ ಮಾಡಿಕೊಳ್ಳುತ್ತಿರುವ ಎಡವಟ್ಟುಗಳು, ರಾಹುಲ್ ನಾಯಕತ್ವದಲ್ಲಿನ ವಿಫಲತೆಗಳು ಒಂದೊಂದಾಗಿ ಹೊರ ಹೊಮ್ಮುತ್ತಿವೆ.

ರಾಹುಲ್ ವಿರುದ್ಧ ಕಾಂಗ್ರೆಸ್ ನಲ್ಲೇ ಅಸಮಾಧಾನವಿದ್ದರೂ ಹೈಕಮಾಂಡ್ ವಿರುದ್ಧ ಮಾತನಾಡಲು ಆಗದೇ ಕೈ ಚೆಲ್ಲಿ ಕುಳಿತಿರುವ ಕಾಂಗ್ರೆಸ್ ನ ಘಟಾನುಘಟಿ ನಾಯಕರ ಮಧ್ಯೆ ಹಾರ್ದಿಕ ಪಟೇಲ್ ಸಿಡಿಸಿರುವ ಈ ಬಾಂಬ್ ರಾಹುಲ್ ನಾಯಕತ್ವದ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search