• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಮುಖಂಡನಾಗಲು ಅರ್ಹನಲ್ಲ: ಹಾರ್ದಿಕ್ ಪಟೇಲ್

TNN Correspondent Posted On February 24, 2018
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಜತೆ ಕೈ ಜೋಡಿಸಿ ಶತಾಯ ಗತಾಯ ಬಿಜೆಪಿಯನ್ನು ಸೋಲಿಸಲು ಯತ್ನಿಸಿದ ಪಾಟೀದಾರ್ ಅನಾಮತ್ ಆಂದೋಲನದ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಇದೀಗ ರಾಹುಲ್ ಗಾಂಧಿವಿರುದ್ಧ ತಿರುಗಿ ಬಿದ್ದಿದ್ದಾರೆ.

ರಾಹುಲ್ ಗಾಂಧಿ ಅವರನ್ನು ನಾನು ಮುಖಂಡನನ್ನಾಗಿ ಸ್ವೀಕರಿಸುವುದಿಲ್ಲ. ವೈಯಕ್ತಿಕವಾಗಿ ರಾಹುಲ್ ಗಾಂಧಿ ಅವರನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ರಾಹುಲ್ ಗಾಂಧಿ ಅವರಿಗೆ ನಾಯಕತ್ವದ ಗುಣಗಳ ಸಮಸ್ಯೆಯಿದೆ ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಬದಲು ಸೋನಿಯಾ ಪುತ್ರಿ, ವಾದ್ರಾ ಪತ್ನಿ ಪ್ರಿಯಾಂಕ್ ಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಭಯಸುತ್ತೇನೆ ಎಂದು ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರು ಹೆಚ್ಚಿನ ಮತಗಳನ್ನು ಸಹಾಯ ಮಾಡಿದ್ದ ಹಾರ್ದಿಕ ಪಟೇಲ್ ಇದೀಗ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ನ್ನೆ ಪ್ರಶ್ನಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಜುಗರ ಉಂಟು ಮಾಡಿದೆ. ಅಲ್ಲದೇ ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತಿರುವುದು ಮತ್ತು ರಾಹುಲ್ ಮಾಡಿಕೊಳ್ಳುತ್ತಿರುವ ಎಡವಟ್ಟುಗಳು, ರಾಹುಲ್ ನಾಯಕತ್ವದಲ್ಲಿನ ವಿಫಲತೆಗಳು ಒಂದೊಂದಾಗಿ ಹೊರ ಹೊಮ್ಮುತ್ತಿವೆ.

ರಾಹುಲ್ ವಿರುದ್ಧ ಕಾಂಗ್ರೆಸ್ ನಲ್ಲೇ ಅಸಮಾಧಾನವಿದ್ದರೂ ಹೈಕಮಾಂಡ್ ವಿರುದ್ಧ ಮಾತನಾಡಲು ಆಗದೇ ಕೈ ಚೆಲ್ಲಿ ಕುಳಿತಿರುವ ಕಾಂಗ್ರೆಸ್ ನ ಘಟಾನುಘಟಿ ನಾಯಕರ ಮಧ್ಯೆ ಹಾರ್ದಿಕ ಪಟೇಲ್ ಸಿಡಿಸಿರುವ ಈ ಬಾಂಬ್ ರಾಹುಲ್ ನಾಯಕತ್ವದ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search