• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸರ್ಕಾರಿ ಶಾಲೆಯಲ್ಲಿ ದಿನಾಲೂ ನಮಾಜ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ, ಇದೇನಿದು ಶಾಲೆಯೋ, ಮಸೀದಿಯೋ?

TNN Correspondent Posted On February 25, 2018


  • Share On Facebook
  • Tweet It

ಬೆಂಗಳೂರು: ಹಾಗೆ ನೋಡಿದರೆ ಯಾವುದೇ ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನವೇ ಹೇಳುತ್ತದೆ. ಮದರಸಾಗಳಲ್ಲೇನೋ ಧರ್ಮ ಬೋಧನೆ ಮಾಡುತ್ತಾರೆ ಎಂದರೆ ಒಪ್ಪೋಣ.

ಆದರೆ ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿಗಳು ಪ್ರತಿದಿನ ಕಡ್ಡಾಯವಾಗಿ ನಮಾಜ್ ಮಾಡಬೇಕು ಎಂದು ಶಾಲೆಯ ಬೋಧಕ ಸಿಬ್ಬಂದಿ ಒತ್ತಾಯ ಮಾಡುತ್ತಾರೆ ಎಂದರೆ, ಅಲ್ಲಿ ಎಂತಹ ಮನಸ್ಥಿತಿಗಳಿರಬೇಕು ಯೋಚಿಸಿ.

ಹೌದು, ಬೆಂಗಳೂರಿನ ಶಿವಾಜಿ ನಗರದ ಶಿವಾಜಿ ರಸ್ತೆಯಲ್ಲಿರುವ ವಿಕೆಒ ಶಾಲೆಯಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಓದುತ್ತಾರೆ. ಆದರೆ ಎಲ್ಲರೂ ದಿನನಿತ್ಯ ನಮಾಜ್ ಮಾಡಲೇಬೇಕು ಎಂದು ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರಿ ಶಾಲೆಯನ್ನು ಖಾಸಗಿ ಸಂಸ್ಥೆಯೊಂದು ದತ್ತು ಪಡೆದುಕೊಂಡಿದ್ದು, ದಿನನಿತ್ಯ ರಾಷ್ಟ್ರಗೀತೆಯ ಬದಲು ನಮಾಜ್ ಮಾಡಬೇಕು ಎಂದು ಒತ್ತಡ ಹೇರಲಾಗುತ್ತಿದೆ. ಅಲ್ಲದೆ ಅಡ್ಮಿಷನ್ ವೇಳೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ ಎಂದು ಹಲವು ಪೋಷಕರು ಆರೋಪಿಸಿದ್ದಾರೆ.

ಆದರೆ, ಸರ್ಕಾರಿ ಅನುದಾನಿತ ಶಾಲೆಯಲ್ಲಿ ಧರ್ಮಬೋಧನೆ ಮಾಡುವುದು ಎಷ್ಟು ಸರಿ? ಮಕ್ಕಳಿಗೆ ಓದುವುದನ್ನು ಕಲಿಸುವುದು ಬಿಟ್ಟು ಆಡಳಿತ ಮಂಡಳಿಯೇಕೆ ನಮಾಜ್ ಮಾಡಿಸುತ್ತಿದೆ? ಎಂಬ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿದ್ದು, ತನಿಖೆಯಾಗಬೇಕಿದೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search