• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಡನ ಅಂತ್ಯಸಂಸ್ಕಾರಕ್ಕೆ 5 ದಿನದ ಕಂದನೊಂದಿಗೆ ಸಮವಸ್ತ್ರ ಧರಿಸಿ ಬಂದ ಮಹಿಳಾ ಸೇನಾಧಿಕಾರಿಗೆ ಸಲಾಂ!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಯಶಃ ಭಾರತದಲ್ಲಿ ಮಾತ್ರ ಮಹಿಳೆಯರು ಇಂತಹ ದಿಟ್ಟತನ, ಕರ್ತವ್ಯಪ್ರಜ್ಞೆ ಮೆರೆಯಬಹುದೇನೋ ಎನಿಸುತ್ತದೆ. ಹೌದು, ಅಸ್ಸೋಂನಲ್ಲಿ ಕೆಲ ದಿನಗಳ ಹಿಂದೆ ಮೈಕ್ರೋಲೈಟ್ ಎಂಬ ವಿಮಾನ ಪತನವಾಗಿ ಡಿ. ವತ್ಸ್ ಎಂಬ ವಾಯುಪಡೆ ಸಿಬ್ಬಂದಿ ಮೃತಪಟ್ಟಿದ್ದು, ಆತನ ಪತ್ನಿ ಐದು ತಿಂಗಳ ಮಗುವಿನೊಂದಿಗೆ ಗಂಡನ ಶವಸಂಸ್ಕಾರಕ್ಕೆ ಆಗಮಿಸಿ ದಿಟ್ಟತನ ಮೆರೆದಿದ್ದಾರೆ.

ಮಹಿಳಾ ಸೇನಾಧಿಕಾರಿ ಸಹ ಆಗಿರುವ ಮೇಜರ್ ಕುಮುದ್ ಡೋಗ್ರಾ ಸೇನಾ ಸಮವಸ್ತ್ರ ಧರಿಸಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಮೂಲಕ ದಿಟ್ಟತನ ಹಾಗೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.

ಗಂಡ ಸತ್ತ ಎಂದು ತಿಂಗಳುಗಟ್ಟಲೇ ಮಹಿಳೆಯರು ಕೋಣೆಯಲ್ಲಿ ಚಿಂತಿಸುತ್ತ ಕೂರುವುದು ಸಾಮಾನ್ಯ. ಆದರೆ ಗಂಡ ದೇಶಸೇವೆಗಾಗಿ ತನ್ನ ಪ್ರಾಣವನ್ನೇ ಒತ್ತೆ ಇಟ್ಟ ಹೆಮ್ಮೆಯಿಂದ ಅಂತ್ಯ ಸಂಸ್ಕಾರಕ್ಕೆ ತೆರಳಿದ ಕುಮುದ್, ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು.

ಕುಮುದ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಗಂಡ ಹುತಾತ್ಮನಾದರೂ, ತಾನೂ ಸೇನೆಯಲ್ಲಿರುವ ಮಹಿಳೆ ಸಮವಸ್ತ್ರ ಧರಿಸಿ ಮಗುವಿನೊಂದಿಗೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿರುವುದು ದಿಟ್ಟತನಕ್ಕೆ ನಿದರ್ಶನ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ಇಂತಹ ದಿಟ್ಟೆಗೆ ನಮ್ಮದೂ ಒಂದು ಸಲಾಂ ಇರಲಿ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search