• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಡನ ಅಂತ್ಯಸಂಸ್ಕಾರಕ್ಕೆ 5 ದಿನದ ಕಂದನೊಂದಿಗೆ ಸಮವಸ್ತ್ರ ಧರಿಸಿ ಬಂದ ಮಹಿಳಾ ಸೇನಾಧಿಕಾರಿಗೆ ಸಲಾಂ!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಯಶಃ ಭಾರತದಲ್ಲಿ ಮಾತ್ರ ಮಹಿಳೆಯರು ಇಂತಹ ದಿಟ್ಟತನ, ಕರ್ತವ್ಯಪ್ರಜ್ಞೆ ಮೆರೆಯಬಹುದೇನೋ ಎನಿಸುತ್ತದೆ. ಹೌದು, ಅಸ್ಸೋಂನಲ್ಲಿ ಕೆಲ ದಿನಗಳ ಹಿಂದೆ ಮೈಕ್ರೋಲೈಟ್ ಎಂಬ ವಿಮಾನ ಪತನವಾಗಿ ಡಿ. ವತ್ಸ್ ಎಂಬ ವಾಯುಪಡೆ ಸಿಬ್ಬಂದಿ ಮೃತಪಟ್ಟಿದ್ದು, ಆತನ ಪತ್ನಿ ಐದು ತಿಂಗಳ ಮಗುವಿನೊಂದಿಗೆ ಗಂಡನ ಶವಸಂಸ್ಕಾರಕ್ಕೆ ಆಗಮಿಸಿ ದಿಟ್ಟತನ ಮೆರೆದಿದ್ದಾರೆ.

ಮಹಿಳಾ ಸೇನಾಧಿಕಾರಿ ಸಹ ಆಗಿರುವ ಮೇಜರ್ ಕುಮುದ್ ಡೋಗ್ರಾ ಸೇನಾ ಸಮವಸ್ತ್ರ ಧರಿಸಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಮೂಲಕ ದಿಟ್ಟತನ ಹಾಗೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.

ಗಂಡ ಸತ್ತ ಎಂದು ತಿಂಗಳುಗಟ್ಟಲೇ ಮಹಿಳೆಯರು ಕೋಣೆಯಲ್ಲಿ ಚಿಂತಿಸುತ್ತ ಕೂರುವುದು ಸಾಮಾನ್ಯ. ಆದರೆ ಗಂಡ ದೇಶಸೇವೆಗಾಗಿ ತನ್ನ ಪ್ರಾಣವನ್ನೇ ಒತ್ತೆ ಇಟ್ಟ ಹೆಮ್ಮೆಯಿಂದ ಅಂತ್ಯ ಸಂಸ್ಕಾರಕ್ಕೆ ತೆರಳಿದ ಕುಮುದ್, ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು.

ಕುಮುದ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಗಂಡ ಹುತಾತ್ಮನಾದರೂ, ತಾನೂ ಸೇನೆಯಲ್ಲಿರುವ ಮಹಿಳೆ ಸಮವಸ್ತ್ರ ಧರಿಸಿ ಮಗುವಿನೊಂದಿಗೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿರುವುದು ದಿಟ್ಟತನಕ್ಕೆ ನಿದರ್ಶನ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ಇಂತಹ ದಿಟ್ಟೆಗೆ ನಮ್ಮದೂ ಒಂದು ಸಲಾಂ ಇರಲಿ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search