• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಣ್ಣಾ ಹಜಾರೆ ಕನಸು ಶೀಘ್ರ ಈಡೇರಿಸಲಿದ್ದಾರಾ ಮೋದಿ?

TNN Correspondent Posted On February 25, 2018


  • Share On Facebook
  • Tweet It

ದೆಹಲಿ: ಗಾಂಧಿವಾದಿ ಅಣ್ಣಾಹಜಾರೆ ನೇತೃತ್ವದಲ್ಲಿ ನವ ಚಳವಳಿ ಮೂಲಕ ಸಂಚಲನ ಮೂಡಿಸಿದ ಲೋಕಪಾಲ್ ಚಳವಳಿಯ ಆಶಯಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು, ಭ್ರಷ್ಟರಿಗೆ ಬಲೆ ಹಾಕುವ ಲೋಕಪಾಲ್ ನೇಮಕದ ದಿನಗಳು ಹತ್ತಿರವಾದಂತಿವೆ.

ಐದು ವರ್ಷಗಳಿಂದ ನೆನೆಗುದಿಗೆ ಬಿದಿರುವ ಮಹತ್ವದ ಲೋಕಪಾಲ್ ನೇಮಕಕ್ಕೆ ನರೇಂದ್ರ ಮೋದಿ ಸರ್ಕಾರ ಮುಂದಾಗಿರುವ ಲಕ್ಷಣ ಗೋಚರಿಸಿವೆ. ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲೋಕಪಾಲ ಕುರಿತು ವಿವರವಾದ ಮಾಹಿತಿ ನೀಡಿದೆ.

ಸರ್ಕಾರೇತರ ಸಂಸ್ಥೆ ‘ಕಾಮನ್ ಕಾಸ್’ ಸಲ್ಲಿಸಿದ್ದ ಅರ್ಜಿಯನ್ನು ಫೆ 23 ರಂದು ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್, ಕೇಂದ್ರ ಸರಕಾರಕ್ಕೆ ವಿವರಣೆ ಕೇಳಿತ್ತು. ವಿವರಣೆ ನೀಡಿರುವ ಕೇಂದ್ರ ಸರ್ಕಾರ  ಮಾರ್ಚ್ 1ರಂದು ಲೋಕಪಾಲ್ ನೇಮಕ ಸಮಿತಿಯ ಸಭೆ ನಡೆಯಲಿದೆ ಎಂದು ತಿಳಿಸಿದೆ.

ಕೇಂದ್ರ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಲೋಕಪಾಲ ಸಮಿತಿಯಲ್ಲಿ, ಸಿಜೆಐ ದೀಪಕ್ ಮಿಶ್ರಾ, ಪ್ರಧಾನಿ ಮೋದಿ ಮತ್ತು ಸಂಸತ್ತಿನ ಉಭಯ ಸದನಗಳ ಪ್ರತಿಪಕ್ಷದ ನಾಯಕರುಗಳು ಸದಸ್ಯರಾಗಿದ್ದಾರೆ.

ವಿರೋಧ ಪಕ್ಷಗಳಲ್ಲಿ ನಾಯಕರ ಕೊರತೆ ಎಂಬ ಕಾರಣಕ್ಕೆ ಲೋಕಪಾಲ ನೇಮಕ ಪ್ರಕ್ರಿಯೆ ವಿಳಂಬವಾಗಬಾರದೆಂದು ಏಪ್ರಿಲ್ ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೇಂದ್ರಕ್ಕೆ ಸೂಚನೆ ನೀಡಿತ್ತು. ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳ ನಾಯಕರು ಇಲ್ಲದಿದ್ದರೂ ಲೋಕಪಾಲ್ ನೇಮಿಸಿ ಎಂದು ನ್ಯಾಯಾಲಯ ಸೂಚನೆ ನೀಡಿತ್ತು. 2014ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ, ವಿರೋಧ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಕೋರ್ಟಿಗೆ ಹೇಳಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search