• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಹಜಾರೆ ಕನಸು ಶೀಘ್ರ ಈಡೇರಿಸಲಿದ್ದಾರಾ ಮೋದಿ?

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಗಾಂಧಿವಾದಿ ಅಣ್ಣಾಹಜಾರೆ ನೇತೃತ್ವದಲ್ಲಿ ನವ ಚಳವಳಿ ಮೂಲಕ ಸಂಚಲನ ಮೂಡಿಸಿದ ಲೋಕಪಾಲ್ ಚಳವಳಿಯ ಆಶಯಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು, ಭ್ರಷ್ಟರಿಗೆ ಬಲೆ ಹಾಕುವ ಲೋಕಪಾಲ್ ನೇಮಕದ ದಿನಗಳು ಹತ್ತಿರವಾದಂತಿವೆ.

ಐದು ವರ್ಷಗಳಿಂದ ನೆನೆಗುದಿಗೆ ಬಿದಿರುವ ಮಹತ್ವದ ಲೋಕಪಾಲ್ ನೇಮಕಕ್ಕೆ ನರೇಂದ್ರ ಮೋದಿ ಸರ್ಕಾರ ಮುಂದಾಗಿರುವ ಲಕ್ಷಣ ಗೋಚರಿಸಿವೆ. ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲೋಕಪಾಲ ಕುರಿತು ವಿವರವಾದ ಮಾಹಿತಿ ನೀಡಿದೆ.

ಸರ್ಕಾರೇತರ ಸಂಸ್ಥೆ ‘ಕಾಮನ್ ಕಾಸ್’ ಸಲ್ಲಿಸಿದ್ದ ಅರ್ಜಿಯನ್ನು ಫೆ 23 ರಂದು ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್, ಕೇಂದ್ರ ಸರಕಾರಕ್ಕೆ ವಿವರಣೆ ಕೇಳಿತ್ತು. ವಿವರಣೆ ನೀಡಿರುವ ಕೇಂದ್ರ ಸರ್ಕಾರ  ಮಾರ್ಚ್ 1ರಂದು ಲೋಕಪಾಲ್ ನೇಮಕ ಸಮಿತಿಯ ಸಭೆ ನಡೆಯಲಿದೆ ಎಂದು ತಿಳಿಸಿದೆ.

ಕೇಂದ್ರ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಲೋಕಪಾಲ ಸಮಿತಿಯಲ್ಲಿ, ಸಿಜೆಐ ದೀಪಕ್ ಮಿಶ್ರಾ, ಪ್ರಧಾನಿ ಮೋದಿ ಮತ್ತು ಸಂಸತ್ತಿನ ಉಭಯ ಸದನಗಳ ಪ್ರತಿಪಕ್ಷದ ನಾಯಕರುಗಳು ಸದಸ್ಯರಾಗಿದ್ದಾರೆ.

ವಿರೋಧ ಪಕ್ಷಗಳಲ್ಲಿ ನಾಯಕರ ಕೊರತೆ ಎಂಬ ಕಾರಣಕ್ಕೆ ಲೋಕಪಾಲ ನೇಮಕ ಪ್ರಕ್ರಿಯೆ ವಿಳಂಬವಾಗಬಾರದೆಂದು ಏಪ್ರಿಲ್ ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೇಂದ್ರಕ್ಕೆ ಸೂಚನೆ ನೀಡಿತ್ತು. ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳ ನಾಯಕರು ಇಲ್ಲದಿದ್ದರೂ ಲೋಕಪಾಲ್ ನೇಮಿಸಿ ಎಂದು ನ್ಯಾಯಾಲಯ ಸೂಚನೆ ನೀಡಿತ್ತು. 2014ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ, ವಿರೋಧ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಕೋರ್ಟಿಗೆ ಹೇಳಿತ್ತು.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search