• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search