• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search