• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018


  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search