• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search