• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀದೇವಿ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟ ಕಾಂಗ್ರೆಸ್ ನಿಜಬಣ್ಣವೂ ಬಯಲಾಯ್ತು!

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಯಾವುದೇ ಒಬ್ಬ ವ್ಯಕ್ತಿ ಮೃತಪಟ್ಟಾಗ, ಅಕಾಲಿಕವಾಗಿ ನಿಧನ ಹೊಂದಿದಾಗ ಸಂತಾಪ ಸೂಚಿಸುವುದು ಸಾಮಾನ್ಯ. ಆಗ ಅವರ ಒಳ್ಳೆತನ, ಉತ್ತಮ ಆದರ್ಶಗಳ ಕುರಿತು ಹೊಗಳುವುದು ಸಹ ಸಹಜ.

ಅದರಲ್ಲೂ ಬಾಲಿವುಡ್ ಬೆಡಗಿ, ನಟಿ ಶ್ರೀದೇವಿ ಅವರಂತಹ ಮೇರು ಪ್ರತಿಭೆ ಅಕಾಲಿಕವಾಗಿ ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸಂತಾಪ ಸೂಚಿಸಿದರು. ಆದರೆ ಎಲ್ಲೂ ಶ್ರೀದೇವಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಿಲ್ಲ.

ಆದರೆ, ಶ್ರೀದೇವಿಯವರ ಸಾವಿನಲ್ಲೂ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಹೋಗಿ ಟೀಕೆಗೆ ಗುರಿಯಾಗಿದೆ. ಹೌದು, ಶ್ರೀದೇವಿ ಸಾವಿನ ಸುದ್ದಿ ಹರಡುತ್ತಲೇ, ಅವರ ನಿಧನಕ್ಕೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿತು.

ಆದರೆ ಹೀಗೆ ಸಂತಾಪ ಸೂಚಿಸುವ ಭರದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್, “ನಟಿ ಶ್ರೀದೇವಿಯವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಆದರೂ ಶ್ರೀದೇವಿಯವರು ನಮ್ಮ ಮನದಲ್ಲಿ ಹಚ್ಚಹಸಿರಾಗಿರುತ್ತಾರೆ. 2013ರಲ್ಲಿ ಯುಪಿಎ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು” ಎಂದು ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡಿದೆ.

ಕಾಂಗ್ರೆಸ್ ಇಂತಹ ರಾಜಕಾರಣದ ಉದ್ದೇಶದಿಂದ ಕೂಡಿದ ಟ್ವೀಟ್ ಮಾಡುತ್ತಲೇ, ಹಲವು ಜನ ಟ್ವಿಟರ್ ನಲ್ಲೇ ಕಾಂಗ್ರೆಸ್ಸಿನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪೇಚಿಗೆ ಸಿಲುಕಿದ ಕಾಂಗ್ರೆಸ್ ಬಳಿಕ ತನ್ನ ಟ್ವೀಟ್ ಅನ್ನೇ ಡಿಲೀಟ್ ಮಾಡಿದೆ. ಯಾವ ವಿಷಯದಲ್ಲಿ ರಾಜಕೀಯ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಇನ್ನಾದರೂ ಕಲಿಯಬೇಕಿದೆ ಎಂಬುದು ಜನರ ಮನದಾಳವಾಗಿದೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search