• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಕ್ಕೆ ಸನ್ಮಾರ್ಗ ತೋರಿಸುವ ಶಕ್ತಿ ಭಾರತಕ್ಕೆ ಮಾತ್ರ: ಮೋಹನ್ ಭಾಗವತ್ ಜೀ

TNN Correspondent Posted On February 26, 2018
0


0
Shares
  • Share On Facebook
  • Tweet It

ಮೀರತ್: ಭಾರತ ಮಾತ್ರ ವಿಶ್ವಕ್ಕೆ ಸನ್ಮಾನ ತೋರುವ ಶಕ್ತಿ ಹೊಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಪಶ್ಚಿಮ ಉತ್ತರ ಪ್ರದೇಶದ ಮೀರನ್ ನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ “ರಾಷ್ಟ್ರೋದಯ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ದೇಶದ ಪ್ರತಿ ನಾಗರೀಕರು ಒಗ್ಗಟ್ಟಿನಿಂದ ಇರಬೇಕು. ಭಾರತದ ಏಕತೆಗೆ ಧಕ್ಕೆ ಉಂಟು ಮಾಡುವ ಪಿತೂರಿಗಳು ನಡೆದಿವೆ. ಅವುಗಳನ್ನು ಎದುರಿಸಲು ಪ್ರತಿ ಭಾರತೀಯ ಒಗ್ಗೂಡಬೇಕು. ಇಲ್ಲದಿದ್ದರೇ ದುಷ್ಟಶಕ್ತಿಗಳು ಭಾರತವನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೇ ಎಂದು ಹೇಳಿದರು.

ಎಲ್ಲ ಹಿಂದೂಗಳು ಒಂದೇ. ನಾವು ಹೆಮ್ಮೆಯಿಂದ ಒಂದೇ ಎಂಬ ಭಾವದಿಂದ ಇರಬೇಕು. ಹಿಂದೂಗಳ ಏಕತೆಗೆ ಶ್ರಮಿಸುವುದು ನಮ್ಮ ಕಾರ್ಯ. ಆಗ ಹಿಂದೂಗಳಿಗೆ ಉಂಟಾಗಿರುವ ತೊಡಕುಗಳನ್ನು ತಡೆಗಟ್ಟಿ ಎಲ್ಲವನ್ನೂ ಎದುರಿಸಬಹುದು. ನಾವು ಏಕತೆ ಸಾಧಿಸದಿದ್ದರೇ ದುಷ್ಟಶಕ್ತಿಗಳನ್ನು ಅದನ್ನು ಉಪಯೋಗಿಸಿಕೊಂಡು, ನಮ್ಮನ್ನು ಒಡೆದು ಆಳುತ್ತಾರೆ ಎಂದು ಹೇಳಿದರು.

ದೇಶದಲ್ಲಿ 1,70,000 ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು ದೇಶದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಡಲು ಸಿದ್ಧರಿದ್ದಾರೆ ಎಂದು ಹೇಳಿದರು.

ಮೀರತ್ ನಲ್ಲಿ ನಡೆದ ರಾಷ್ಟ್ರೋದಯ ಸಮ್ಮೇಳನದಲ್ಲಿ 3 ಲಕ್ಷಕ್ಕಿಂತ ಅಧಿಕ ಸ್ವಯಂ ಸೇವಕರು ಭಾಗವಹಿಸಿದ್ದು ವಿಶೇಷವಾಗಿತ್ತು. ಶಿಸ್ತಿಗೆ ಹೆಸರಾದ ಸಂಘಟನೆಯ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search