• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಅಸಾದುದ್ದೀನ್ ಓವೈಸಿ ಪ್ರಭಾವಿತನಾಗಿದ್ದಾರೆ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On February 26, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಹಿಂದುತ್ವದ್ದೇ ಮೇಲುಗೈ ಆಗುತ್ತಿದೆ, ಮುಸ್ಲಿಮರನ್ನು ತುಳಿಯಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಟಾಂಗ್ ನೀಡಿದ್ದು, ಅಸಾದುದ್ದೀನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾ ಆತ್ಮದಿಂದ ಪ್ರಭಾವಿತರಾಗಿದ್ದಾರೆ. ಅದಕ್ಕಾಗಿಯೇ ಅವರು ಯಾವಾಗಲೂ ದೇಶವನ್ನು ಒಡೆಯುವ ಹೇಳಿಕೆ ನೀಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಭಾರತದಲ್ಲಿರುವ ಮುಸ್ಲಿಮರು ಬಾಬರನ ಸಂತತಿಯವರು ಹಾಗೂ ವಿದೇಶಿಯರು ಎಂಬ ಓವೈಸಿ ಹೇಳಿಕೆಗೂ ಟಾಂಗ್ ನೀಡಿರುವ ಸಿಂಗ್, ಭಾರತದಲ್ಲಿರುವ ಮುಸ್ಲಿಮರು ಬಾಬರ್ ಸಂತತಿಯವರೂ ಅಲ್ಲ, ವಿದೇಶಿಯರೂ ಅಲ್ಲ, ಅವರು ರಾಮನ ಸಂತತಿಯವರು ಎಂದಿದ್ದಾರೆ.

ಪ್ರಸ್ತುತ ದೇಶದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳ ಆಚರಣೆಯಲ್ಲಿ ವೈವಿಧ್ಯತೆ ಇರಬಹುದು. ನಂಬಿಕೆಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ನಮ್ಮ ಪೂರ್ವಿಕರು ಮಾತ್ರ ಒಬ್ಬರೇ (ರಾಮ) ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಷಯದ ಕುರಿತು ಕಳೆದ ಶನಿವಾರ ಮಾತನಾಡಿದ್ದ ಅಸಾದುದ್ದೀನ್ ಓವೈಸಿ, “ನಾವು ಬಾಬರನ ಸಂತತಿಯವರಾಗಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಂಗುಲ ಜಾಗವೂ ನೀಡುವುದಿಲ್ಲ. ಸುಪ್ರೀಂ ಕೊರ್ಟ್ ನಮಗೆ ಮತೆ ಮಸೀದಿ ಕಟ್ಟಲು ಅನುಮತಿ ನೀಡುವ ವಿಶ್ವಾಸವಿದೆ” ಎಂದಿದ್ದರು.

ಅಲ್ಲದೆ ಪ್ರಸ್ತುತ ಭಾರತ ಹಿಂದೂಮಯವಾಗುತ್ತಿದ್ದು, ನಮ್ಮನ್ನು ಪಾಕಿಸ್ತಾನಿಯರು ಎಂಬಂತೆ ನೋಡಲಾಗುತ್ತಿದೆ. ಈ ದಿಸೆಯಲ್ಲಾದರೂ ನಾವು ಅಯೋಧ್ಯೆಯಲ್ಲಿ ಬಾಬ್ರೀ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search