• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅವಳಿ ಕರುಗಳಿಗೆ ಜನ್ಮ ನೀಡಿದ ಗೋಮಾತೆಯನ್ನು ಕಂಡೀರಾ?

TNN Correspondent Posted On July 15, 2017
0


0
Shares
  • Share On Facebook
  • Tweet It

ಸುರತ್ಕಲ್ ಸಮೀಪ ಅಪರೂಪದ ಘಟನೆ

ಮಂಗಳೂರಿನ ಹೊರವಲಯದ ಸುರತ್ಕಲ್ ನಲ್ಲಿ ಅಪರೂಪದಲ್ಲಿ ಅಪರೂಪವಾದ ಒಂದು ಘಟನೆ ನಡೆದಿದೆ. ಆದರೆ ಈ ಘಟನೆ ಮಾತ್ರ ಸಕರಾತ್ಮಕ ಎನ್ನುವುದು ವಿಶೇಷ. ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ಕುಲಾಲ್ ಭವನದ ಎದುರು ಗಣಪತಿ ಮಯ್ಯ ಎನ್ನುವವರ ಮನೆಯ ಕೊಟ್ಟಿಗೆಯಲ್ಲಿ ದನ ಅವಳಿ ಕರುಗಳಿಗೆ ಜನ್ಮ ನೀಡುವ ಮೂಲಕ ಎಲ್ಲರನ್ನು ಅಚ್ಚರಿಗೆ ಕೆಡವಿದೆ.

ಸಾಮಾನ್ಯವಾಗಿ ದನ ಏಕಕಾಲಕ್ಕೆ ಎರಡು ಕರುಗಳಿಗೆ ಜನ್ಮ ಕೊಡುವುದಿಲ್ಲ. ಆದರೆ ಜುಲೈ 9 ರಂದು ಬೆಳಿಗ್ಗೆ ಗಣಪತಿ ಮಯೂರ್ ಅವರು ತಮ್ಮ ಮನೆಯ ಕೊಟ್ಟಿಗೆಗೆ ಬೆಳಿಗ್ಗೆ 6 ಗಂಟೆಗೆ ಹೋಗುವಾಗ ಅವರ ಗೋ ಗೌರಿ ಮೊದಲ ಗಂಡು ಕರುವಿಗೆ ಜನ್ಮ ನೀಡಿದ್ದಳು. ಅಲ್ಲಿಗೆ ಸುಸೂತ್ರವಾಗಿ ಹೆರಿಗೆ ಆಯಿತಲ್ಲ ಎಂದು ಮನೆಯವರೆಲ್ಲಾ ಸಂತಸ ಪಡುತ್ತಿರುವಾಗ ಮತ್ತೊಂದು ಅಚ್ಚರಿ ಅವರನ್ನು ಕಾಯುತ್ತಿತ್ತು. ಸುಮಾರು ಏಳು ಗಂಟೆಯ ಹೊತ್ತಿಗೆ ಗೌರಿ ಮತ್ತೊಂದು ಕರುವಿಗೆ ಜನ್ಮ ನೀಡಿದ್ದಳು. ಈ ವಿಸ್ಮಯದಿಂದ ಎಲ್ಲರೂ ಮೂಕವಿಸ್ಮಿತರಾಗಿ ಹೋಗಿದ್ದರು.

ಸ್ವತ: ಚುಚ್ಚುಮದ್ದು ನೀಡಿ ದನದ ಚಿಕಿತ್ಸೆ ಮಾಡಿದ ವೈದ್ಯರಿಗೂ ಆಶ್ಚರ್ಯವಾಗಿದೆ.
ಈ ಸುದ್ದಿಯನ್ನು ತುಳುನಾಡು ನ್ಯೂಸ್ ನೊಂದಿಗೆ ಹಂಚಿಕೊಂಡ ಮನೆಯವರು ಇಂತಹ ಘಟನೆ ಹಿಂದೆ ಯಾವತ್ತಾದರೂ ಆಗಿರಬಹುದು. ಆದರೆ ಇದು ಅಪರೂಪದಲ್ಲಿ ಅಪರೂಪದ ಸಂಗತಿ. ಸಾಮಾನ್ಯವಾಗಿ ಗೋವುಗಳು ಒಂದು ಕರುವಿಗೆ ಜನ್ಮಕೊಡುವುದು ಸಾಮಾನ್ಯ ಪ್ರಕ್ರಿಯೆ. ನಮ್ಮ ದನಕ್ಕೆ ಕೂಡ ಇಲ್ಲಿಯವರೆಗೆ ಐದು ಬಾರಿ ಹೆರಿಗೆ ಆಗಿದೆ. ಐದು ಬಾರಿಯೂ ಇಂತಹ ವಿಸ್ಮಯ ನಡೆದಿಲ್ಲ. ಎರಡು ಕರು ಮತ್ತು ತಾಯಿ ಆರೋಗ್ಯವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಅವಳಿ ಕರುಗಳಿಗೆ ಜನ್ಮ ನೀಡಿದ ಗೋವನ್ನು ನೋಡಲು ತುಂಬಾ ಜನ ಕುತೂಹಲಿಗರು ಮನೆಗೆ ಆಗಮಿಸುತ್ತಿದ್ದಾರೆ. ಆಸ್ಟಿನ್ ತಳಿಯ ಈ ದನ ದಿನಕ್ಕೆ ಆರು ಲೀಟರ್ ಹಾಲನ್ನು ನೀಡುತ್ತದೆ. ಐದು ಬಾರಿಯೂ ಇಂಜೆಕ್ಷನ್ ನೀಡಿಯೇ ಹೆರಿಗೆ ಮಾಡಿಸಲಾಗಿದೆ. ಈ ಬಾರಿಯೂ ಹಾಗೆ ಮಾಡಲಾಗಿತ್ತು. ಒಟ್ಟಿನಲ್ಲಿ ಎರಡು ಹೊಸ ಸದಸ್ಯರ ಆಗಮನದಿಂದ ಮಯೂರ್ ಗಣಪತಿ ಮನೆಯಲ್ಲಿ ಸಂತಸದ ವಾತಾವರಣ ಮೂಡಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search