• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಭಾರತ್ ಮಾತಾಕೀ ಜೈ ಎನ್ನದವರು ಪಾಕಿಸ್ತಾನಿಯರಲ್ಲದೆ ಮತ್ಯಾರು?

TNN Correspondent Posted On February 26, 2018
0


0
Shares
  • Share On Facebook
  • Tweet It

ಕರುಳ ಬಳ್ಳಿ ಕತ್ತರಿಸಿಕೊಂಡರೂ ಒಂದು ಮಗು ತಾಯಿಯೊಂದಿಗೆ ಸಂಬಂಧ ಉಳಿಸಿಕೊಳ್ಳುತ್ತದೆ. ತಾನು ಹೆತ್ತ ಮಗುವನ್ನು ತಾಯಿಯೂ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಮೊದಲಿಗೆ ಪ್ರತಿಯೊಂದಕ್ಕೂ ತಾಯಿಯನ್ನೇ ಆಶ್ರಯಿಸುವ ಮಗು ಬರಬರುತ್ತ ನಡೆಯಲು, ಊಟ ಮಾಡಲು, ತಿರುಗಾಡಲು ಕಲಿಯುತ್ತದೆ.

ಮುಂದೊಂದು ದಿನ ತನ್ನ ಕಾಲ ಮೇಲೆ ತಾನು ನಿಂತು, ಹೆಸರು, ಹಣ, ಖ್ಯಾತಿ ಗಳಿಸಿದರೂ ಆತ ತನ್ನ ತಾಯಿಯನ್ನು ನೆನೆಯುತ್ತಾನೆ. ಸ್ಮರಿಸುತ್ತಾನೆ, ವಂದಿಸುತ್ತಾನೆ. ಏಕೆಂದರೆ ತಾಯಿ ಪ್ರೀತಿಯ ಋಣ ಆತನನ್ನು ಕಾಡುತ್ತದೆ.

ಅದೇ ರೀತಿ, ನಾವು ನಮ್ಮ ದೇಶವನ್ನು ಭಾರತ ಮಾತೆ, ಅಂದರೆ ತಾಯಿಗೆ ಹೋಲಿಸುತ್ತೇವೆ. ಅದಕ್ಕಾಗಿಯೇ ಭಾರತ್ ಮಾತಾ ಕೀ ಜೈ ಎನ್ನುತ್ತೇವೆ. ವಂದೇ ಮಾತಾರಂ ಎಂದ ಸಹ ಭಾರತ ಮಾತೆಯೇ ನಿನಗಿದೋ ವಂದನೆ ಎನ್ನುತ್ತೇವೆ.

ಈಗ ಇದೇ ಹೋಲಿಕೆಯನ್ನು ಮಗುವಿಗೆ ಹೋಲಿಸೋಣ. ಒಬ್ಬ ಮಗ ತಾಯಿಯ ಎದೆಹಾಲು ಕುಡಿದು, ಕೈ ತುತ್ತು ತಿಂದು, ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ, ಇಳಿ ವಯಸ್ಸಿನಲ್ಲಿ ಚೆನ್ನಾಗಿ ನೋಡಿಕೊಳ್ಳದಿದ್ದರೆ ನಾವೇ ಕ್ಯಾಕರಿಸಿ ಉಗಿಯುತ್ತೇವೆ. ನೀನ್ಯಾವ ಸೀಮೆಯ ಮಗನೋ, ಆಕೆಯ ಹೊಟ್ಟೆಯಲ್ಲಿ ಹುಟ್ಟದಿದ್ದರೇನೇ ಚೆನ್ನಾಗಿರುತ್ತಿತ್ತಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತೇವೆ.

ಇದೇ ಅರ್ಥದಲ್ಲಿಯೇ ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು, “ಭಾರತ್ ಮಾತಾ ಕೀ ಜೈ ಎನ್ನದವರು ಪಾಕಿಸ್ತಾನಿಯರು” ಎಂದು ಹೇಳಿದ್ದು.

ಆದರೆ ಇದನ್ನೇ ವಿವಾದವನ್ನಾಗಿ ಮಾಡಲಾಯಿತು. ಭಾರತ ಜಾತ್ಯಾತೀತ ರಾಷ್ಟ್ರ ಎಂಬ ಹೆಸರು ಕಳಚಿ, ಹಿಂದೂಗಳ ರಾಷ್ಟ್ರವನ್ನಾಗಿ ಮಾಡಲಾಗುತ್ತಿದೆ. ಹಿಂದೂಯೇತರರನ್ನು ಬಿಜೆಪಿ ಪಾಕಿಸ್ತಾನಕ್ಕೆ ಕಳುಹಿಸಲು ಹೊಂಚು ಹಾಕುತ್ತಿದೆ, ಹೇಳಿಕೆ ವಿವಾದದಿಂದ ಕೂಡಿದೆ…

ಹೀಗೆ ಸುರೇಂದ್ರ ಸಿಂಗ್ ವಿರುದ್ಧ ಹಲವು ಟೀಕೆಗಳು, ಆರೋಪಗಳನ್ನು ಮಾಡಲಾಯಿತು. ಆದರೆ ಸುರೇಂದ್ರ ಸಿಂಗ್ ಹೇಳಿದುದರಲ್ಲಿ ಯಾವ ತಪ್ಪಿದೆ? ಭಾರತದಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ನಮ್ಮ ಸರ್ಕಾರದ ಸೌಲಭ್ಯ ಪಡೆದು, ಕೊನೆಗೆ ಇದೇ ಮಣ್ಣಲ್ಲಿ ಮಣ್ಣಾಗಿ ಹೋಗುವವರು ಭಾರತ್ ಮಾತಾ ಕೀ ಜೈ ಎನ್ನುವುದರಲ್ಲಿ ಯಾವ ತಪ್ಪಿದೆ?

ಭಾರತ್ ಮಾತಾ ಕೀ ಜೈ ಎನ್ನುವುದೇ ತಪ್ಪು ಎಂದಾದರೆ, ನಾನು ಭಾರತ್ ಮಾತಾ ಕೀ ಜೈ ಎನ್ನುವುದಿಲ್ಲ ಎನ್ನುವ ಮನಸ್ಸುಗಳಿದ್ದರೆ, ಅವರು ಶತ್ರುರಾಷ್ಟ್ರ ಪಾಕಿಸ್ತಾನಿಯರು ಎಂದು ಹೋಲಿಸುವುದರಲ್ಲಿ ಯಾವ ತಪ್ಪಿದೆ? ಹೆತ್ತ ತಾಯಿಯನ್ನು ನಮಿಸದವನು ಅವನ್ಯಾವ ಮಗ? ಹುಟ್ಟಿದ ನಾಡಿಗೆ ಜೈ ಎನ್ನದವನು ಅವನ್ಯಾವ ಸೀಮೆ ನಾಗರಿಕ? ಯೋಚಿಸಿ.

 

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search