• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರನ್ನು ಪ್ರಶ್ನಿಸುವ ರಾಹುಲ್ ಗಾಂಧಿ ಅಮರಿಂದರ್ ಸಿಂಗ್ ಅಳಿಯನ ಹಗರಣದ ಕುರಿತು ಏನೆನ್ನುತ್ತಾರೆ?

TNN Correspondent Posted On February 26, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಒಂದೊಂದೇ ಬ್ಯಾಂಕ್ ಹಗರಣಗಳು ಹೊರಬೀಳುತ್ತಿವೆ. ನೀರವ್ ಮೋದಿ, ಮೇಹುಲ್ ಚೌಕ್ಸಿ, ವಿಕ್ರಂ ಕೊಠಾರಿ, ಸಭ್ಯ ಸೇಠ್… ಬ್ಯಾಂಕುಗಳಲ್ಲಿ ಸಾಲ ಪಡೆದು ಮೋಸ ಮಾಡಿ ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಎಲ್ಲ ವಂಚಕ ಉದ್ಯಮಿಗಳಿಗೆ ಬ್ಯಾಂಕುಗಳು ಸಾಲ ನೀಡಿದ್ದು ಯುಪಿಎ ಆಡಳಿತದಲ್ಲಿ ಎಂಬುದು ಗಮನಾರ್ಹ.

ಆದರೆ ಎಂತಹ ದುರಂತ ಎಂದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಈ ಎಲ್ಲ ಹಗರಣಗಳಿಗೆಲ್ಲ ಮೋದಿ ಅವರೇ ಕಾರಣ, ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ರೀತಿ ಮಾತನಾಡುತ್ತಾರೆ. ಬ್ಯಾಂಕ್ ವಂಚಕರಿಗೂ, ಮೋದಿ ಅವರಿಗೂ ಎಲ್ಲಿಂದೆಲ್ಲಿಯ ಸಂಬಂಧ ಎಂಬ ಕನಿಷ್ಠ ಅರಿವೂ ಇಲ್ಲದೆ ರಾಹುಲ್ ಗಾಂಧಿ ಆರೋಪಿಸುತ್ತಾರೆ.

ಆದರೆ, ಈಗ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನಲ್ಲಿ ಸಾಲ ಪಡೆದು, ಸುಮಾರು 200 ಕೋಟಿ ರೂ. ವಂಚನೆ ಮಾಡಿದ ಆರೋಪದಲ್ಲಿ ಪಂಜಾಬ್ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಅಮರಿಂದರ್ ಸಿಂಗ್ ಅಳಿಯ ಗುರ್ಪಾಲ್ ಸಿಂಗ್ ಸೇರಿ ಹಲವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಸಿಂಭಾವೋಲಿ ಶುಗರ್ಸ್ ಕಂಪನಿ ಹೆಸರಿನಲ್ಲಿ ಸಾಲ ಪಡೆದು, ಈಗ ಮರುಪಾವತಿಸದ ಹಿನ್ನೆಲೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ಯಾವ ಬ್ಯಾಂಕ್ ಹಗರಣದಲ್ಲಿ ಮೋದಿ ಹೆಸರನ್ನು ತಳುಕು ಹಾಕಿದ್ದರೋ, ಅದೇ ರಾಹುಲ್ ಗಾಂಧಿ ಈಗ ತಮ್ಮದೇ ಪಕ್ಷದ ಸಿಎಂ ಒಬ್ಬರ ಅಳಿಯ ಬ್ಯಾಂಕ್ ಹಗರಣದಲ್ಲಿ ಸಿಲುಕಿದ್ದಾರೆ. ಈ ಕುರಿತು ಇದುವರೆಗೂ ರಾಹುಲ್ ಗಾಂಧಿ ಅವರು ತುಟಿ ಬಿಚ್ಚಿಲ್ಲ ಎಂಬುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search