• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನದ ಶಂಕಿತ ಉಗ್ರನ ಶವ ಪತ್ತೆ, ಪಾಕ್ ನಿಜಬಣ್ಣಕ್ಕಿದು ನಿದರ್ಶನ!

TNN Correspondent Posted On February 27, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಉಪಟಳಕ್ಕೆ ದಶಕದ ಉದಾಹರಣೆಯಿದ್ದು, ಈಗ ಮತ್ತೊಮ್ಮೆ ಇದಕ್ಕೆ ನಿದರ್ಶನ ಸಿಕ್ಕಿದೆ.

ಬಂಡಿಪೋರಾ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಾಕಿಸ್ತಾನದ ಶಂಕಿತ ಉಗ್ರನ ಶವ ಪತ್ತೆಯಾಗಿದ್ದು, ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಉಗ್ರ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತೀವ್ರ ಗಾಯಗೊಂಡ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬೆಳಗ್ಗೆಯೇ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನ ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಹಾಗೂ ಸಿಆರ್ ಪಿಎಫ್ ಯೋಧರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಸ್.ಪಿ. ವೇದ್ ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಪಾಕಿಸ್ತಾನಿ ಉಗ್ರ, ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಸದಸ್ಯ ಎಂದು ಶಂಕಿಸಲಾಗಿದೆ. ಆತನ ಹೆಸರು ಸೇರಿ ಹಲವು ವಿವರಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ವೇದ್ ತಿಳಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಪಾಕಿಸ್ತಾನ ಜಮ್ಮು-ಕಾಶ್ಮೀರದಲ್ಲಿ ಸುಮಾರು 50ಕ್ಕೂ ಬಾರಿ ಕದನ ವಿರಾಮ ಉಲ್ಲಂಘಿಸುವ ಜತೆಗೆ ಹಲವು ಬಾರಿ ಉಗ್ರರನ್ನು ಛೂ ಬಿಡುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಪ್ರತ್ಯುತ್ತರ ನೀಡುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search