• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫತ್ವಾ ಹೊರಡಿಸುವ ಮೂಲಭೂತವಾದಿಗಳೇ ಕೇಳಿ ಸೌದಿಯಲ್ಲೂ ಮಹಿಳಾ ಸೈನಿಕರು

TNN Correspondent Posted On February 27, 2018
0


0
Shares
  • Share On Facebook
  • Tweet It

ಮನಾಮ: ಕಠೋರ ಮುಸ್ಲಿಂ ರಾಷ್ಟ್ರ ಎಂದೇ ಬಿಂಬಿತವಾಗಿದ್ದ ಸೌದಿ ಅರೇಬಿಯಾ ಮುಸ್ಲಿಂ ಧರ್ಮದ ಅಂಧಾಚರಣೆಗಳಿಗೆ ವಿರಾಮ ಹೇಳುತ್ತಿದ್ದು, ನಿರಂತರವಾಗಿ ಕ್ರಾಂತಿಕಾರಕ ನಿರ್ಧಾರ ಕೈಗೊಳ್ಳುವ ಮೂಲಕ, ವಿಶೇಷವಾಗಿ ಮುಸ್ಲಿಂ ಧರ್ಮದಲ್ಲಿ ಅತ್ಯಂತ ಹೀನ ಸ್ಥಿತಿಯಲ್ಲಿದ್ದ ಮಹಿಳೆಯರ ಸ್ವಾತಂತ್ರ್ಯಕ್ಕೆ ಪ್ರಾಮುಖ್ಯ ನೀಡುತ್ತ ವಿಶ್ವದ ಗಮನ ಸೆಳೆದಿದೆ. ಅಲ್ಲದೇ ಮುಸ್ಲಿಂ ಧರ್ಮದಲ್ಲೂ ಬದಲಾವಣೆಗೆ ಮುನ್ನಡೆ ಬರೆಯುವ ಮೂಲಕ ಮೂಲಭೂತವಾದಿಗಳಿಗೆ ಸ್ವಾತಂತ್ರ್ಯ, ಸಮಾನತೆಯ ಸಂದೇಶ ನೀಡಿದ್ದಾರೆ. ಇದೀಗ ಸೌದಿ ಅರೇಬಿಯಾ ಸರ್ಕಾರ ಮಹಿಳೆಯರಿಗೆ ಸೈನ್ಯದಲ್ಲಿ ಸೇರಲು ಅವಕಾಶ ನೀಡುವ ಐತಿಹಾಸಿಕ, ಕ್ರಾಂತಿಕಾರಿ ನಿರ್ಧಾರ ಪ್ರಕಟಿಸಿದೆ.

ಮಹಿಳೆಯರನ್ನು ಸರ್ವ ಕ್ಷೇತ್ರಗಳಲ್ಲಿ ತೊಡಗಿಸಬೇಕು ಎಂಬ ನಿರ್ಧಾರದೊಂದಿಗೆ ಕಳೆದ ವಾರವೇ ಸೇನೆಗೆ ಸೇರಲು ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್ 1ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಸೇನೆ ಸೇರುವ ಮಹಿಳೆಯರು ಕಡ್ಡಾಯವಾಗಿ ಸೌದಿ ನಾಗರಿಕರಾಗಿರಬೇಕು. ಪ್ರೌಢ ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು ಎಂಬ ಅರ್ಹತೆ ವಿಧಿಸಲಾಗಿದೆ. 25 ರಿಂದ 35 ವರ್ಷ ವಯಸ್ಸಯ ಇರಬೇಕು, ಕನಿಷ್ಠ 155 ಸೆಂ.ಮೀ ಉದ್ದ ಇರಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿತ್ತು.

ಪರೀಕ್ಷೆ ಪಾಸಾದ ಬಳಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆಗಳು ಇರುತ್ತವೆ ಎಂದು ತಿಳಿಸಿದೆ. ಅದೇ ರೀತಿ ಅಭ್ಯರ್ಥಿ ಸೌದಿಯೇತರ ವ್ಯಕ್ತಿಯನ್ನು ವಿವಾಹವಾಗಿರಬಾರದು ಎಂಬ ನಿಯಮವನ್ನೂ ವಿಧಿಸಿದೆ. ಆಯ್ಕೆಯಾದ ಮಹಿಳೆಯರನ್ನು ರಿಯಾದ್, ಮೆಕ್ಕಾ, ಮದೀನಾ, ಖಾಸಿಮ್, ಅಸ್ಸೆರ್, ಅಲ್ ಬಹಾ, ಈಸ್ಟ್ರನ್ ಪ್ರಾವಿನ್ಸ್‌ಗಳಲ್ಲಿ ನಿಯಮಿಸಲಾಗುವುದು ಎಂದು ಪಬ್ಲಿಕ್ ಸೆಕ್ಯುರಿಟಿ ಜನರಲ್ ಡೈರೆಕ್ಟರ್ ತಿಳಿಸಿದೆ.

ಇತ್ತೀಚೆಗೆ ಸೌದಿ ಸರ್ಕಾರ ಯೋಗಕ್ಕೆ, ಮಹಿಳೆಯರು ಫುಟ್ಬಾಲ್ ನೋಡಲು ಅವಕಾಶ, ಸ್ವಂತ ಉದ್ದಿಮೆ ನಡೆಸಲು ಅವಕಾಶ ನೀಡುವುದು ಸೇರಿ ಹಲವು ಮಹತ್ತರ ಕ್ರಾಂತಿಕಾರಿ ನಿರ್ಧಾರಗಳನ್ನು ಸೌದಿ ಸರ್ಕಾರ ತೆಗೆದುಕೊಂಡಿತ್ತು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search