• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿಪುರಾದಲ್ಲಿ ಮೊದಲ ಬಾರಿಗೆ ಅರಳಲಿದೆ ಕಮಲ, ಸಮೀಕ್ಷೆ ಅನ್ವಯ ಬಿಜೆಪಿ ಹಾದಿ ಸರಳ

TNN Correspondent Posted On February 27, 2018
0


0
Shares
  • Share On Facebook
  • Tweet It

ಅಗರ್ತಲಾ: ಕರ್ನಾಟಕ ಸೇರಿ ಪ್ರಸಕ್ತ ವರ್ಷದಲ್ಲಿ ನಡೆಯುವ ಎಂಟೂ ವಿಧಾನಸಭೆ ಚುನಾವಣೆಗಳಲ್ಲಿ ಕೇಸರಿ ಧ್ವಜ ಹಾರಿಸುವ ಕನಸು ಕಂಡಿರುವ ಬಿಜೆಪಿ ಕನಸಿಗೆ ಆರಂಭದಲ್ಲೇ ರೆಕ್ಕೆಪುಕ್ಕ ಬಂದಿವೆ.

ಹೌದು, ತ್ರಿಪುರಾದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಕೇಸರಿ ಧ್ವಜ ಹಾರಾಡಲಿದೆ ಎಂದು ನ್ಯೂಸ್ ಎಕ್ಸ್ ಸಂಸ್ಥೆ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ರಾಜ್ಯದಲ್ಲಿ ಐ.ಪಿ.ಎಫ್.ಟಿ. ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಈ ಮೈತ್ರಿಕೂಟ ಸುಮಾರು 35 ರಿಂದ 45 ಸ್ಥಾನಗಳನ್ನು ಕಬಳಿಸಿದೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದ್ದು, ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದೇ ಹೇಳಲಾಗುತ್ತಿದೆ.

ಅತ್ತ ಕಳೆದ 25 ವರ್ಷಗಳಿಂದ ತ್ರಿಪುರಾದಲ್ಲಿ ಸಿಪಿಎಂ ಸರ್ಕಾರ ಅಸ್ತಿತ್ವದಲ್ಲಿದ್ದು, ಸಮೀಕ್ಷೆ ಪ್ರಕಾರ ಸಿಪಿಎಂ ಕೇವಲ 14-23 ಸ್ಥಾನಗಳಲ್ಲಿ ಜಯ ಗಳಿಸಿ ಅದಿಕಾರ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಅತ್ತ ಆ್ಯಕ್ಸಿಸ್ ಮೈ ಇಂಡಿಯಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲೂ ತ್ರಿಪುರಾದಲ್ಲಿ ಕೇಸರಿ ಧ್ವಜ ಹಾರಾಡಲಿದ್ದು, ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ ಸುಮಾರು 50 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದೆ.

ಒಟ್ಟಿನಲ್ಲಿ ಪ್ರಸ್ತುತ ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಈ ಬಾರಿ ನಡೆಯುವ ಹಲವು ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ ನಿರೀಕ್ಷಿತ ಮುನ್ನಡೆ ಸಾಧಿಸಲಿದೆ ಎಂಬುದಕ್ಕೆ ತ್ರಿಪುರಾ ಚುನಾವಣೋತ್ತರ ಸಮೀಕ್ಷೆ ಕನ್ನಡಿ ಹಿಡಿದಿವೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search