• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ಮೋದಿ ಸರ್ಕಾರ ನೀಡಿದ ಭರ್ಜರಿ ಉಡುಗೊರೆ ಯಾವುದು ಗೊತ್ತಾ?

TNN Correspondent Posted On February 27, 2018


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ನೀಡುವ ಸಬ್ಸಿಡಿ ಕಡಿತಗೊಳಿಸಿ, ಆ ಹಣವನ್ನು ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು ಎಂದು ಘೋಷಿಸಿದಾಗ ಕೆಲವು ಮತಿಗೇಡಿಗಳು ಇದು ಮುಸ್ಲಿಂ ವಿರೋಧಿ ನೀತಿ ಎಂದು ಬೊಬ್ಬೆ ಹಾಕಿದ್ದರು.

ಆದರೆ ಈಗ ಹಿಂದೆ ಬೊಬ್ಬೆ ಹಾಕಿದವರ ಹಾಗೂ ಮುಂದೆ ಹಾಕುವವರ ಬಾಯಿಗೆ ಬೀಗ ಹಾಕಿದ್ದು, ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ಭರ್ಜರಿ ಉಡುಗೊರೆ ನೀಡಿದೆ.

ಹೌದು, ವಿಮಾನದಲ್ಲಿ ಹಜ್ ಯಾತ್ರೆ ಕೈಗೊಳ್ಳುವವರು ಇದುವರೆಗೆ ನೀಡುತ್ತಿದ್ದ ಪ್ರಯಾಣ ವೆಚ್ಚವನ್ನು ಕೇಂದ್ರ ಸರ್ಕಾರ ಅಪಾರ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಇದುವರೆಗೆ ಇದ್ದ ಗರಿಷ್ಠ ಮೊತ್ತವಾದ 97 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಕೇವಲ 20 ಸಾವಿರ ರೂಪಾಯಿಗೆ ಇಳಿಸಿದ್ದು, ಹಜ್ ಯಾತ್ರಿಕರಿಗೆ ಖುಷಿ ತಂದಿದೆ.

ಈ ಕುರಿತು ಮಾತನಾಡಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಇದು ಕೇಂದ್ರ ಸರ್ಕಾರದ ಮಹತ್ತರ ನಿರ್ಧಾರವಾಗಿದ್ದು, ಹಜ್ ಯಾತ್ರೆ ಕೈಗೊಳ್ಳುವವರಿಗೆ ಇದು ಅನುಕೂಲ ಹಾಗೂ ಇದು ಕಾಂಗ್ರೆಸ್ ಸರ್ಕಾರ ನಡೆಸಿದ್ದ ಅಲ್ಪಸಂಖ್ಯಾತರ ಓಲೈಕೆ ಹಾಗೂ ಮನವೊಲಿಸುವ ರಾಜಕಾರಣದ ಅಂತ್ಯವೂ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.

ಈ ನಿರ್ಧಾರ ಪ್ರಧಾನ ಮಂತ್ರಿ ಕಚೇರಿಯಿಂದ ವಿಶೇಷ ಆಸಕ್ತಿಯಿಂದ ತೆಗೆದುಕೊಳ್ಳಲಾಗಿದ್ದು, ಯಾವುದೇ ಮನವೊಲಿಕೆ, ಷಡ್ಯಂತ್ರ ಇಲ್ಲದೆ ಜನರನ್ನು ಅಭಿವೃದ್ಧಿಗೊಳಿಸುವುದೇ ಕೇಂದ್ರ ಸರ್ಕಾರದ ಧ್ಯೇಯವಾಗಿದೆ ಎಂದು ನಖ್ವಿ ತಿಳಿಸಿದ್ದಾರೆ.

ದೇಶದ ಹಲವು ಭಾಗಗಳಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ಹಲವು ವ್ಯತ್ಯಾಸದಲ್ಲಿ ಗರಿಷ್ಠ ದರ ನಿಗದಿ ಮಾಡಲಾಗಿತ್ತು. ಈಗ ದರ ಕಡಿತದಿಂದ ಕಾಶ್ಮೀರದಿಂದ ಸೌದಿಗೆ ತೆರಳಲು ಇದ್ದ ವೆಚ್ಚ 1.98 ಲಕ್ಷ ರೂಪಾಯಿಯಿಂದ 1.01 ಲಕ್ಷ, ವಾರಣಸಿಯಿಂದ ಇದುವರೆಗೂ ಇದ್ದ 1.12 ಲಕ್ಷ ರೂಪಾಯಿಯಿಂದ 92 ಸಾವಿರ ರೂಪಾಯಿಗೆ ಇಳಿಸಲಾಗಿದೆ. ಇನ್ನೂ ಹಲವು ಭಾಗಗಳಿಂದ ಪ್ರಯಾಣಿಸುವ ದರವೂ ಕಡಿತವಾಗಲಿದೆ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಪ್ರತಿ ವರ್ಷ ಸೌದಿ ಅರೇಬಿಯಾಗೆ ತೆರಳುವ ಮುಸ್ಲಿಮರಿಗೆ ಭಾರಿ ಅನುಕೂಲವಾಗಲಿದ್ದು, ಇದು ಕೇಂದ್ರ ಸರ್ಕಾರದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ತತ್ವಕ್ಕೂ ಅನ್ವಯವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search