• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ಮೋದಿ ಸರ್ಕಾರ ನೀಡಿದ ಭರ್ಜರಿ ಉಡುಗೊರೆ ಯಾವುದು ಗೊತ್ತಾ?

TNN Correspondent Posted On February 27, 2018


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ನೀಡುವ ಸಬ್ಸಿಡಿ ಕಡಿತಗೊಳಿಸಿ, ಆ ಹಣವನ್ನು ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು ಎಂದು ಘೋಷಿಸಿದಾಗ ಕೆಲವು ಮತಿಗೇಡಿಗಳು ಇದು ಮುಸ್ಲಿಂ ವಿರೋಧಿ ನೀತಿ ಎಂದು ಬೊಬ್ಬೆ ಹಾಕಿದ್ದರು.

ಆದರೆ ಈಗ ಹಿಂದೆ ಬೊಬ್ಬೆ ಹಾಕಿದವರ ಹಾಗೂ ಮುಂದೆ ಹಾಕುವವರ ಬಾಯಿಗೆ ಬೀಗ ಹಾಕಿದ್ದು, ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ಭರ್ಜರಿ ಉಡುಗೊರೆ ನೀಡಿದೆ.

ಹೌದು, ವಿಮಾನದಲ್ಲಿ ಹಜ್ ಯಾತ್ರೆ ಕೈಗೊಳ್ಳುವವರು ಇದುವರೆಗೆ ನೀಡುತ್ತಿದ್ದ ಪ್ರಯಾಣ ವೆಚ್ಚವನ್ನು ಕೇಂದ್ರ ಸರ್ಕಾರ ಅಪಾರ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಇದುವರೆಗೆ ಇದ್ದ ಗರಿಷ್ಠ ಮೊತ್ತವಾದ 97 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಕೇವಲ 20 ಸಾವಿರ ರೂಪಾಯಿಗೆ ಇಳಿಸಿದ್ದು, ಹಜ್ ಯಾತ್ರಿಕರಿಗೆ ಖುಷಿ ತಂದಿದೆ.

ಈ ಕುರಿತು ಮಾತನಾಡಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಇದು ಕೇಂದ್ರ ಸರ್ಕಾರದ ಮಹತ್ತರ ನಿರ್ಧಾರವಾಗಿದ್ದು, ಹಜ್ ಯಾತ್ರೆ ಕೈಗೊಳ್ಳುವವರಿಗೆ ಇದು ಅನುಕೂಲ ಹಾಗೂ ಇದು ಕಾಂಗ್ರೆಸ್ ಸರ್ಕಾರ ನಡೆಸಿದ್ದ ಅಲ್ಪಸಂಖ್ಯಾತರ ಓಲೈಕೆ ಹಾಗೂ ಮನವೊಲಿಸುವ ರಾಜಕಾರಣದ ಅಂತ್ಯವೂ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.

ಈ ನಿರ್ಧಾರ ಪ್ರಧಾನ ಮಂತ್ರಿ ಕಚೇರಿಯಿಂದ ವಿಶೇಷ ಆಸಕ್ತಿಯಿಂದ ತೆಗೆದುಕೊಳ್ಳಲಾಗಿದ್ದು, ಯಾವುದೇ ಮನವೊಲಿಕೆ, ಷಡ್ಯಂತ್ರ ಇಲ್ಲದೆ ಜನರನ್ನು ಅಭಿವೃದ್ಧಿಗೊಳಿಸುವುದೇ ಕೇಂದ್ರ ಸರ್ಕಾರದ ಧ್ಯೇಯವಾಗಿದೆ ಎಂದು ನಖ್ವಿ ತಿಳಿಸಿದ್ದಾರೆ.

ದೇಶದ ಹಲವು ಭಾಗಗಳಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ಹಲವು ವ್ಯತ್ಯಾಸದಲ್ಲಿ ಗರಿಷ್ಠ ದರ ನಿಗದಿ ಮಾಡಲಾಗಿತ್ತು. ಈಗ ದರ ಕಡಿತದಿಂದ ಕಾಶ್ಮೀರದಿಂದ ಸೌದಿಗೆ ತೆರಳಲು ಇದ್ದ ವೆಚ್ಚ 1.98 ಲಕ್ಷ ರೂಪಾಯಿಯಿಂದ 1.01 ಲಕ್ಷ, ವಾರಣಸಿಯಿಂದ ಇದುವರೆಗೂ ಇದ್ದ 1.12 ಲಕ್ಷ ರೂಪಾಯಿಯಿಂದ 92 ಸಾವಿರ ರೂಪಾಯಿಗೆ ಇಳಿಸಲಾಗಿದೆ. ಇನ್ನೂ ಹಲವು ಭಾಗಗಳಿಂದ ಪ್ರಯಾಣಿಸುವ ದರವೂ ಕಡಿತವಾಗಲಿದೆ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಪ್ರತಿ ವರ್ಷ ಸೌದಿ ಅರೇಬಿಯಾಗೆ ತೆರಳುವ ಮುಸ್ಲಿಮರಿಗೆ ಭಾರಿ ಅನುಕೂಲವಾಗಲಿದ್ದು, ಇದು ಕೇಂದ್ರ ಸರ್ಕಾರದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ತತ್ವಕ್ಕೂ ಅನ್ವಯವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search