• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ಮೋದಿ ಸರ್ಕಾರ ನೀಡಿದ ಭರ್ಜರಿ ಉಡುಗೊರೆ ಯಾವುದು ಗೊತ್ತಾ?

TNN Correspondent Posted On February 27, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ನೀಡುವ ಸಬ್ಸಿಡಿ ಕಡಿತಗೊಳಿಸಿ, ಆ ಹಣವನ್ನು ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು ಎಂದು ಘೋಷಿಸಿದಾಗ ಕೆಲವು ಮತಿಗೇಡಿಗಳು ಇದು ಮುಸ್ಲಿಂ ವಿರೋಧಿ ನೀತಿ ಎಂದು ಬೊಬ್ಬೆ ಹಾಕಿದ್ದರು.

ಆದರೆ ಈಗ ಹಿಂದೆ ಬೊಬ್ಬೆ ಹಾಕಿದವರ ಹಾಗೂ ಮುಂದೆ ಹಾಕುವವರ ಬಾಯಿಗೆ ಬೀಗ ಹಾಕಿದ್ದು, ಹಜ್ ಯಾತ್ರೆ ಕೈಗೊಳ್ಳುವ ಮುಸ್ಲಿಮರಿಗೆ ಭರ್ಜರಿ ಉಡುಗೊರೆ ನೀಡಿದೆ.

ಹೌದು, ವಿಮಾನದಲ್ಲಿ ಹಜ್ ಯಾತ್ರೆ ಕೈಗೊಳ್ಳುವವರು ಇದುವರೆಗೆ ನೀಡುತ್ತಿದ್ದ ಪ್ರಯಾಣ ವೆಚ್ಚವನ್ನು ಕೇಂದ್ರ ಸರ್ಕಾರ ಅಪಾರ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಇದುವರೆಗೆ ಇದ್ದ ಗರಿಷ್ಠ ಮೊತ್ತವಾದ 97 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಕೇವಲ 20 ಸಾವಿರ ರೂಪಾಯಿಗೆ ಇಳಿಸಿದ್ದು, ಹಜ್ ಯಾತ್ರಿಕರಿಗೆ ಖುಷಿ ತಂದಿದೆ.

ಈ ಕುರಿತು ಮಾತನಾಡಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಇದು ಕೇಂದ್ರ ಸರ್ಕಾರದ ಮಹತ್ತರ ನಿರ್ಧಾರವಾಗಿದ್ದು, ಹಜ್ ಯಾತ್ರೆ ಕೈಗೊಳ್ಳುವವರಿಗೆ ಇದು ಅನುಕೂಲ ಹಾಗೂ ಇದು ಕಾಂಗ್ರೆಸ್ ಸರ್ಕಾರ ನಡೆಸಿದ್ದ ಅಲ್ಪಸಂಖ್ಯಾತರ ಓಲೈಕೆ ಹಾಗೂ ಮನವೊಲಿಸುವ ರಾಜಕಾರಣದ ಅಂತ್ಯವೂ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.

ಈ ನಿರ್ಧಾರ ಪ್ರಧಾನ ಮಂತ್ರಿ ಕಚೇರಿಯಿಂದ ವಿಶೇಷ ಆಸಕ್ತಿಯಿಂದ ತೆಗೆದುಕೊಳ್ಳಲಾಗಿದ್ದು, ಯಾವುದೇ ಮನವೊಲಿಕೆ, ಷಡ್ಯಂತ್ರ ಇಲ್ಲದೆ ಜನರನ್ನು ಅಭಿವೃದ್ಧಿಗೊಳಿಸುವುದೇ ಕೇಂದ್ರ ಸರ್ಕಾರದ ಧ್ಯೇಯವಾಗಿದೆ ಎಂದು ನಖ್ವಿ ತಿಳಿಸಿದ್ದಾರೆ.

ದೇಶದ ಹಲವು ಭಾಗಗಳಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ಹಲವು ವ್ಯತ್ಯಾಸದಲ್ಲಿ ಗರಿಷ್ಠ ದರ ನಿಗದಿ ಮಾಡಲಾಗಿತ್ತು. ಈಗ ದರ ಕಡಿತದಿಂದ ಕಾಶ್ಮೀರದಿಂದ ಸೌದಿಗೆ ತೆರಳಲು ಇದ್ದ ವೆಚ್ಚ 1.98 ಲಕ್ಷ ರೂಪಾಯಿಯಿಂದ 1.01 ಲಕ್ಷ, ವಾರಣಸಿಯಿಂದ ಇದುವರೆಗೂ ಇದ್ದ 1.12 ಲಕ್ಷ ರೂಪಾಯಿಯಿಂದ 92 ಸಾವಿರ ರೂಪಾಯಿಗೆ ಇಳಿಸಲಾಗಿದೆ. ಇನ್ನೂ ಹಲವು ಭಾಗಗಳಿಂದ ಪ್ರಯಾಣಿಸುವ ದರವೂ ಕಡಿತವಾಗಲಿದೆ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಪ್ರತಿ ವರ್ಷ ಸೌದಿ ಅರೇಬಿಯಾಗೆ ತೆರಳುವ ಮುಸ್ಲಿಮರಿಗೆ ಭಾರಿ ಅನುಕೂಲವಾಗಲಿದ್ದು, ಇದು ಕೇಂದ್ರ ಸರ್ಕಾರದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ತತ್ವಕ್ಕೂ ಅನ್ವಯವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search