• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮಾಡಿದರು ಮೋಡಿ, ಜಿಎಸ್ಟಿ ವಿರೋಧಿಗಳೇ ಜಿಡಿಪಿ ದರ ನೋಡಿ ಮಾತಾಡಿ

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಮಹತ್ತರ ಯೋಜನೆ ಜಾರಿಗೆ ತರಲಿ, ಅದನ್ನು ಸುಖಾಸುಮ್ಮನೆ ವಿರೋಧಿಸಲೆಂದೇ ಕೆಲವು ಪಡೆಗಳು ಬಕಪಕ್ಷಿಗಳಂತೆ ಕಾಯುತ್ತವೆ.

ಅದಕ್ಕೆ ನೋಟು ನಿಷೇಧ, ಜಿಎಸ್ಟಿ ಜಾರಿ, ತ್ರಿವಳಿ ತಲಾಖ್ ರದ್ದು ಮಸೂದೆ, ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ… ಹೀಗೆ ಯಾವುದೇ ಪ್ರಮುಖ ನಿರ್ಧಾರ ಕೈಗೊಂಡರೂ ಮೋದಿ ಅವರನ್ನು ತೆಗಳಿಯೇ ತೆಗಳಿದ್ದಾರೆ. ಹಾಗೆಯೇ ತಮ್ಮ ತೆಗಳಿಕೆಯೇ ಸುಳ್ಳು ಎಂಬುದು ಪ್ರತಿ ಬಾರಿಯೂ ಸಾಬೀತಾಗಿದೆ.

ಅದರಲ್ಲೂ ಕೇಂದ್ರ ಸರ್ಕಾರ ಭ್ರಷ್ಟಾಚಾರ ತೊಲಗಿಸಲು ಹಾಗೂ ತೆರಿಗೆ ಪದ್ಧತಿ ಸುಧಾರಣೆ ಮಾಡಲು ನೋಟುನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗಲಂತೂ ಈ ಮೋದಿ ವಿರೋಧಿ ಪಡೆ ಆರ್ಥಿಕ ತಜ್ಞರಂತೆ, ಭಾರತದ ಆರ್ಥಿಕತೆ ಕುಸಿಯುತ್ತದೆ, ಜಿಡಿಪಿ ದರ ನೋಡಿ ಕುಸಿಯುತ್ತಿದೆ, ಮೋದಿ ಅವರು ದೇಶದ ವಿತ್ತೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿದರು ಎಂದು ಬೊಬ್ಬೆ ಹಾಕಿದರು.

ಆದರೆ ಏನಾಯಿತು ನೋಡಿ. ಭಾರತದ ನೋಟು ನಿಷೇಧ ಹಾಗೂ ಜಿಎಸ್ಟಿ ದೇಶದ ಆರ್ಥಿಕತೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದ್ದು, ಭಾರತದ ಜಿಡಿಪಿ ಜಿಂಕೆಯಂತೆ ನೆಗೆಯುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಇದುವರೆಗೆ ಇದ್ದ ಭಾರತದ ಜಿಡಿಪಿ ಶೇ.6.5 ರಿಂದ ಶೇ.7.2ನ್ನು ತಲುಪುವ ಮೂಲಕ ದೇಶದ ಅಭಿವೃದ್ಧಿಯ ಮಾನದಂಡವಾಗಿ ಕಾಣುತ್ತಿದೆ.

ಕಳೆದ ಸೆಪ್ಟೆಂಬರ್ ನಲ್ಲಿ ಶೇ.6.3ರಷ್ಟಿದ್ದ ಜಿಡಿಪಿ ವರ್ಷಾಂತ್ಯದ ವೇಳೆಗೆ 6.5 ತಲುಪಿತ್ತು. ಪ್ರಸಕ್ತ ವರ್ಷದಲ್ಲಿ ಈ ದರ ಶೇ.7.1 ತಲುಪಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಜಿಡಿಪಿ ದರದಲ್ಲಿ ಬೆಳವಣಿಗೆಯಾಗಿದ್ದು, 7.2 ತಲುಪಿದೆ. ಆ ಮೂಲಕ ಜಿಎಸ್ಟಿ, ನೋಟು ನಿಷೇಧ ವಿರೋಧಿಸಿದವರಿಗೆ ಸರಿಯಾದ ಉತ್ತರವೇ ಸಿಕ್ಕಂತಾಗಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search