• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೇಟಿಗೂ ಮುನ್ನವೇ ಮೋದಿಗೆ ಮನಸೋತ ಜೋರ್ಡಾನ್, ವೀಸಾ ನೀಡಲು ಒಪ್ಪಿಗೆ

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರಿಗೆ ಇಂದು ಇಡೀ ವಿಶ್ವವೇ ಗೌರವ ನೀಡುತ್ತಿದೆ. ಮೋದಿ ಅವರು ಪ್ರಧಾನಿಯಾಗುತ್ತಲೇ ಅಮೆರಿಕ ಕೆಂಪು ಹಾಸು ಹಾಕಿ ಸ್ವಾಗತಿಸಿತು, ಚೀನಾ ಸಹ ಭಾರತವೆಂದರೆ ಭಯ ಬೀಳುವಂತಾಯಿತು, ಸೌದಿ ಹಿಂದೂ ದೇವಾಲಯವೇ ನಿರ್ಮಿಸಲು ಮುಂದಾಯಿತು.

ಹೀಗೆ ಭಾರತದ ಘನತೆಯನ್ನು ಮೋದಿ ಅವರು ಹೆಚ್ಚಿಸುತ್ತಿರುವ ಬೆನ್ನಲ್ಲೇ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಗೌರವ ಸಿಕ್ಕಿದ್ದು, ಮೋದಿ ಅವರನ್ನು ಭೇಟಿಗೂ ಮುನ್ನವೇ ಜೋರ್ಡಾನ್ ಗೆ ತೆರಳಲು ಭಾರತೀಯರಿಗೆ ವೀಸಾ ನೀಡುವುದಾಗಿ ಜೋರ್ಡಾನ್ ಸರ್ಕಾರ ಘೋಷಿಸಿದೆ.

ಹೌದು, ಶುಕ್ರವಾರ ಜೋರ್ಡಾನ್ ಅರಸ ಕಿಂಗ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅದಕ್ಕೂ ಮೋದಲೇ ಜೋರ್ಡಾನ್ ಮಹತ್ತರ ನಿರ್ಧಾರವೊಂದು ಪ್ರಕಟಿಸಿದ್ದು, ಜೋರ್ಡಾನ್ ಗೆ ಭೇಟಿ ನೀಡುವ ಭಾರತೀಯರಿಗೆ ವೀಸಾ ಸೌಲಭ್ಯ ಒದಗಿಸುವುದಾಗಿ ಅಲ್ಲಿನ ಸರ್ಕಾರ ತಿಳಿಸಿದೆ.

ಅಲ್ಲದೆ ಜೋರ್ಡಾನ್ ಅರಸ ಭಾರತಕ್ಕೆ ಭೇಟಿ ನೀಡಿ, ದ್ವಿಪಕ್ಷೀಯ ಮಾತುಕತೆ ನಡೆಸುವ ಜತೆಗೆ, ಉಭಯ ರಾಷ್ಟ್ರಗಳ ನಡುವೆ ಮಹತ್ತರ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎರಡೂ ದೇಶಗಳ ನಡುವೆ ಆರೋಗ್ಯ, ರಕ್ಷಣೆ, ಪರಸ್ಪರ ಸಹಕಾರ, ಉತ್ತಮ ಸೌಹಾರ್ದತೆ, ವ್ಯಾಪಾರ, ಸಂವಹನ ಸೇರಿ ಹಲವು ಕ್ಷೇತ್ರಗಳಲ್ಲಿ ಭಾರತ ಹಾಗೂ ಜೋರ್ಡಾನ್ ನಾಯಕರು ಮಹತ್ತರ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search