• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಾರ್ವಜನಿಕ ಸ್ಥಳದಲ್ಲೇ ಕಡಬ ಸಿಎ ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ:-ಇಂದು ಕಡಬ ಬಂದ್ ಗೆ ಕರೆ!

TNN Correspondent Posted On July 17, 2017


  • Share On Facebook
  • Tweet It

ಕಡಬ ಸಿ ಎ ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರಿಗೆ ಭಾನುವಾರ ಸಂಜೆ ಕಡಬ ದ ಮುಖ್ಯ ಪೇಟೆಯಲ್ಲಿ  ಐದು ಜನರ ತಂಡವೊಂದು ಹಲ್ಲೆ ನಡೆಸಿದ್ದು, ಕಡಬದಲ್ಲಿ ಕೆಲವು ಕಾಲ ಉದ್ವಿಘ್ನ ವಾತಾವರಣ ಉಂಟಾಗಿದೆ. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್, ನಗರದ ಯಶೋಧಾ ಸೂಪರ್ ಮಾರ್ಕೆಟ್‌ಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸಿ ಜೀಪಿನ ಹತ್ತಿರ ಆಗಮಿಸುತ್ತಿದ್ದಾಗ  ಏಕಾಏಕಿ ಮುಗಿಬಿದ್ದ  ಆಕ್ರಮಣಕಾರರು ಕಬ್ಬಿಣದ ರಾಡ್ ನಿಂದ  ಯದ್ವಾತದ್ವಾ ಹಲ್ಲೆನಡೆಸಿದ್ದಾರೆ.

ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ರಮೇಶ್ ಕಲ್ಪುರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕುಟ್ರುಪಾಡಿಯ ನಿವಾಸಿಗಳಾದ ಪ್ರಕಾಶ್ ಕೊಲ್ಯದ ಕಟ್ಟ ತಿನ್ಸನ್, ಸನೋಷ್, ಲಿಜೋ, ಸಂತೋಷ್ ಎಂದು ತಿಳಿದು ಬಂದಿದೆ. ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಕಡೆಗಳಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬಕ್ಕೆ ಜಮಾಹಿಸಿದರು. ಘಟನೆಯ ಹಿನ್ನೆಲೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಸೋಮವಾರದಂದು ಕಡಬ ಬಂದ್‌ಗೆ ಕರೆ ನೀಡಿದ್ದಾರೆ.

ಪೂರ್ವ ಯೋಜಿತ ಕೃತ್ಯ:- ಕಳೆದ ಒಂದು ವಾರದಿಂದ ಈ ಐದು ಜನರ ತಂಡ ಕಡಬ ಪೇಟೆಯಲ್ಲಿ ಸುತ್ತಾಡುತಿದ್ದರು. ಸದಾ ಜನ ಜಂಗುಳಿಯಿಂದ ಕೂಡಿರುವ ಕಡಬ ಪೇಟೆಗೆ ಗಸ್ತು ಪೊಲೀಸರನ್ನು ನೇಮಿಸಬೇಕು  ಎಂದು ಸಾರ್ವಜನಿಕರು  ಆಗ್ರಹಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search