• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಉಗ್ರರನ್ನು ಹೊಡೆದುರುಳಿಸುವ ಜತೆಗೆ ಐಸಿಸ್ ಅಸ್ತಿತ್ವಕ್ಕೂ ಅವಕಾಶ ಕೊಟ್ಟಿಲ್ಲ!

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಸಕ್ತ ಸಾಲಿನಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತದ ಮೇಲೆ ಹಲವು ಬಾರಿ ದಾಳಿ ಮಾಡಿದ್ದಾರೆ. ಪಾಕಿಸ್ತಾನಿ ಸೈನಿಕರೇ 50ಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ತಿಳಿದುಬಂದಿದೆ. ಪ್ರತಿ ಬಾರಿ ದಾಳಿ ಮಾಡಿದಾಗಲೂ ಸೈನಿಕರನ್ನೇ ಗುರಿಯಾಗಿಸಿದೆ. ಕೆಲವೊಮ್ಮೆ ಸಾರ್ವಜನಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ.

ಇದನ್ನೆಲ್ಲ ಅವಲೋಕಿಸಿದಾಗ, ಕಾಶ್ಮೀರದಲ್ಲಿ ಪದೇಪದೆ ನಡೆಯುತ್ತಿರುವ ದಾಳಿಯನ್ನು ಗಮನಿಸಿದಾಗ, ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಸಂಘಟನೆ ನೆಲೆಯೂರಿದೆಯಾ? ಐಸಿಎಸ್ ಉಗ್ರರು ಜಮ್ಮು-ಕಾಶ್ಮೀರದ ಕಾಡುಗಳಲ್ಲಿ ಅವಿತಿದ್ದಾರಾ? ಈ ಸಂಘಟನೆ ಕಾಶ್ಮೀರದ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಜತೆ ಕೈ ಜೋಡಿಸಿದೆಯಾ ಎಂಬ ಕುರಿತು ಅನುಮಾನಗಳು ಮೂಡಿದ್ದವು. ಚರ್ಚೆಗಳು ಶುರುವಾಗಿದ್ದವು.

ಆದರೆ ನಮ್ಮ ಸೈನಿಕರು ಪಾಕಿಸ್ತಾನಿ ಸೈನಿಕರ ಗುಂಡಿಗೆ ಪ್ರತಿ ಗುಂಡು ಹಾರಿಸಿ, ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಿ, ದಿಟ್ಟ ಹೋರಾಟ ನಡೆಸುವ ಜತೆಗೆ, ಐಸಿಸ್ಸಿನ ಲವಲೇಶವೂ ಜಮ್ಮು-ಕಾಶ್ಮೀರವನ್ನು ಪ್ರವೇಶಿಸಲು ಬಿಟ್ಟಿಲ್ಲ ಎಂಬುದು ಖಚಿತವಾಗಿದೆ. ಆ ಮೂಲಕ ನಮ್ಮ ಯೋಧರು ದಕ್ಷ ಹೋರಾಟದ ಜತೆಗೆ, ಮುನ್ನೆಚ್ಚರಿಕೆಯಿಂದಲೂ ಇದ್ದಾರೆ ಎಂಬುದು ಸಾಬೀತಾಗಿದೆ.

ಹೌದು, ಈ ಕುರಿತು ಕೇಂದ್ರ ಗೃಹ ಸಚಿವಾಲಯವೇ ಸ್ಪಷ್ಟನೆ ನೀಡಿದ್ದು, ಜಮ್ಮು-ಕಾಶ್ಮೀರದಲ್ಲಿ ಐಸಿಎಸ್ ಉಗ್ರ ಸಂಘಟನೆಯ ಯಾವುದೇ ಉಗ್ರರು, ಐಸಿಸ್ ಘಟಕದ ಅಸ್ತಿತ್ವ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಫಾರೂಕ್ ಅಹ್ಮದ್ ಯಾಟೂ ಎಂಬುವವರನ್ನು ಉಗ್ರರು ಭಾನುವಾರ ಹತ್ಯೆ ಮಾಡಿದ ಬಳಿಕ, ಕಣಿವೆ ರಾಜ್ಯದಲ್ಲಿ ಐಸಿಸ್ ಸಂಘಟನೆ ನೆಲೆಯೂರಿದೆ ಎಂಬ ಅನುಮಾನ ಬಲವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವಾಲಯ ಮಾಹಿತಿ ಸಂಗ್ರಹಿಸಿದ್ದು, ಐಸಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಸ್ಪಷ್ಟಪಡಿಸಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search