• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶಾದ್ಯಂತ ಏಕಕಾಲದಲ್ಲೇ ಚುನಾವಣೆ ನಡೆಸಲು ಮೋದಿ, ಅಮಿತ್ ಷಾ ಮಾಡಿರುವ ಯೋಜನೆ ಏನು ಗೊತ್ತಾ?

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರಚನೆಯಾದ ಮೇಲೆ ಭಾರತದಲ್ಲಿ ಮಹತ್ತರ ಹಾಗೂ ದಿಟ್ಟ ಬದಲಾವಣೆಗಳಾಗುತ್ತಿರುವ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್ ಷಾ ಜೋಡಿ, ಮತ್ತೊಂದು ಮಹತ್ವದ ಬದಲಾವಣೆಗೆ ಸಜ್ಜಾಗಿದೆ ಎಂದು ತಿಳಿದುಬಂದಿದೆ.

ಹೌದು, ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ಎಂಬ ಕಲ್ಪನೆ ಮೂಡಿಸಿ, ಅದನ್ನು ಸಾಕಾರಗೊಳಿಸಲು ಈ ಜೋಡಿ ಮುಂದಾಗಿದ್ದು, ಈ ಕುರಿತು ಚರ್ಚಿಸಲು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಡೆಸುವ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಮೇಲೂ ಮೋದಿ-ಶಾ ಕಣ್ಣಿಟ್ಟಿದ್ದು, ಗೆಲುವಿಗೆ ತಂತ್ರ ರೂಪಿಸುವ ಕುರಿತು ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹಿಸುತ್ತದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರ ಕಲ್ಯಾಣಕ್ಕಾಗಿ ಯಾವ ಯೋಜನೆ ಜಾರಿಗೊಳಿಸಬೇಕು, ಬಡವರ ಪರ ಆಡಳಿತ ನೀಡಲು ಯಾವ ಯೋಜನೆ ಸಹಕಾರಿ? ಅಭಿವೃದ್ಧಿಗಾಗಿ ಏನು ಮಾಡಬೇಕು? ಇದುವರೆಗೂ ಜಾರಿಗೆ ತಂದ ಯೋಜನೆಗಳು ಎಷ್ಟರಮಟ್ಟಿಗೆ ಪರಿಣಾಮ ಬೀರಿವೆ? ಆಗಬೇಕಾದ ಸುಧಾರಣೆಗಳಾವವು? ಎಂಬುದರ ಕುರಿತು ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಈ ಎಲ್ಲ ಅಂಶಗಳಲ್ಲಿ ಮಹತ್ತರವಾಗಿ ದೇಶಾದ್ಯಂತ ಏಕಕಾಲದಲ್ಲೇ ಚುನಾವಣೆ ನಡೆಸುವ ಕುರಿತು ಚರ್ಚೆ ಮಾಡಲಾಗುತ್ತದೆ ಎಂಬ ಅಂಶ ಗಮನ ಸೆಳೆದಿದ್ದು, ಅದಕ್ಕಾಗಿ ಸರ್ಕಾರ ಯಾವ ನಡೆ ಇಡುತ್ತದೆ? ಹೇಗೆ ಸಿದ್ಧತೆ ಮಾಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ. ಅಷ್ಟಕ್ಕೂ ಮೋದಿ ಎಂದರೇನೆ ಕುತೂಹಲ ಅಲ್ಲವೇ?

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search