• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬದಲಾಗುತ್ತಿದೆ ಉತ್ತರ ಪ್ರದೇಶ, ನಮಾಜ್ ಸಮಯ ಬದಲಾಯಿಸಿ ಸೌಹಾರ್ದತೆ ಮೆರೆದ ಮುಸ್ಲಿಂ ಧರ್ಮಗುರುಗಳು

TNN Correspondent Posted On March 1, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡಾಗಿನಿಂದ ಆ ರಾಜ್ಯದ ಚಹರೆಯೇ ಬದಲಾಗುತ್ತಿದೆ. ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಅಪರಾಧಿಗಳನ್ನು ಸದೆ ಬಡೆದಿದ್ದಾರೆ. ಅಲ್ಲದೇ ಸರ್ವರಿಗೂ ಸಮಾನತೆ ನೀಡುವ ಮೂಲಕ ತುಷ್ಟೀಕರಣ ರಾಜಕಾರಣಕ್ಕೆ ಬ್ರೇಕ್ ಹಾಕಿದ್ದಾರೆ. ಇದರಿಂದ ಇದೀಗ ಉತ್ತರ ಪ್ರದೇಶ ಶಾಂತಿಯತ್ತ ಹೊರಳುತ್ತಿದೆ. ಅದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದ ಮುಸ್ಲಿಂ ಧರ್ಮಗುರುಗಳು ಸೌಹಾರ್ದತೆ ಮೆರೆದಿದ್ದಾರೆ.

ಮಾರ್ಚ್ 2 ಉತ್ತರ ಪ್ರದೇಶದಲ್ಲಿ ನಡೆಯಲಿರುವ ಹೋಳಿ ಹಬ್ಬದ ನಿಮಿತ್ತ ಮುಸ್ಲಿಂ ಧರ್ಮಗುರುಗಳು  ಅಸಫಿ (ಬಾದಾ) ಇಮಾಂಬರಾದಲ್ಲಿ ಶುಕ್ರವಾರ ನಡೆಯುವ ನಮಾಜ್‌ ಸಮಯವನ್ನು ಶಿಯಾ ಧರ್ಮ ಗುರುಗಳಾದ ಮೌಲಾನಾ ಕಲ್ಬೆ ಜವಾದ್ 30 ನಿಮಿಷ ಮುಂದೂಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.
ಮಧ್ಯಾಹ್ನ ಬಣ್ಣದೋಕುಳಿ ಆಡುವ ಹಿಂದೂ ಬಾಂಧವರಿಗೆ ತೊಂದರೆಯಾಗಬಾರದು ಎಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಸ್ಲಿಂ ಧರ್ಮಗುರು 0ಮೌಲಾನಾ ಕಲ್ಬೆ ಜವಾದ್ ತಿಳಿಸಿದ್ದಾರೆ. ಸಾಮಾನ್ಯವಾಗಿ 12-1 ಗಂಟೆಯವರೆಗೆ ನಡೆಯುವ ಶುಕ್ರವಾರದ ನಮಾಜ್ ಸಮಯವನ್ನು 12.45 ರಿಂದ 1.45ಕ್ಕೆ ಮುಂದೂಡಲಾಗಿದೆ.

ಸಂಭ್ರಮದ ಹೋಳಿ ಆಚರಿಸಲು ಮಧ್ಯಾಹ್ನ 12 ಗಂಟೆಯವರೆಗೂ ಅವಕಾಶವಿರುತ್ತದೆ. ಆದರೆ, ನಿಗದಿತ ಸಮಯ ಮೀರುವುದು ಸಾಮಾನ್ಯ. ಉಭಯ ಸಮುದಾಯಗಳ ಮಧ್ಯೆ ಕೋಮ ಸಾಮರಸ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಮಾಜ್ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮೌಲಾನಾ ತಿಳಿಸಿದ್ದಾರೆ. ನಮಾಜ್ ಸಮಯ ಮುಂದೂಡುವ ಮೂಲಕ ಸೌಹಾರ್ದತೆಯ ಹೊಸ ಶಕೆ ಆರಂಭಿಸಲಾಗಿದೆ. ಯೋಗಿ ಆದಿತ್ಯನಾಥ್ ಕೈಗೊಂಡಿರುವ ತುಷ್ಟೀಕರಣವಲ್ಲದ ನಿರ್ಧಾರಗಳು ಇಂತಹ ವಾತಾವರಣ ಸೃಷ್ಟಿಯಾಗಲು ಕಾರಣ ಎನ್ನಲಾಗುತ್ತಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search