• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿಗೆ ದಾರಿ ನೀಡಿ, ಸೌಹಾರ್ದತೆ ಮೆರೆದ ಹಿಂದೂಗಳು

TNN Correspondent Posted On March 1, 2018
0


0
Shares
  • Share On Facebook
  • Tweet It

ಫೈಜಬಾದ್: ಇದುವರೆಗೆ ಕೇವಲ ಹಿಂದೂ ಮುಸ್ಲಿಂ ಕೋಮು ಗಲಭೆಗೆ ಪ್ರಚಾರದಲ್ಲಿರುತ್ತಿದ್ದ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೇರಿದ ನಂತರ ಹೊಸ ಶಕೆ ಆರಂಭವಾಗಿದೆ. ಹಿಂದೂ, ಮುಸ್ಲಿಂ ಎನ್ನದೇ ಕಠಿಣ ನಿರ್ಧಾರಗಳ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿರುವ ಯೋಗಿ ಸರ್ಕಾರ, ಶಾಂತಿ, ಸೌಹಾರ್ದತೆಯನ್ನು ಸಾರುತ್ತಿದೆ. ಇನ್ನು ವಿಶ್ವದಲ್ಲೇ ಶಾಂತಿ, ಸೌಹಾರ್ದತೆ, ಸಹಕಾರ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಹಿಂದೂಗಳು ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವ ಮೂಲಕ ಸೌಹಾರ್ದತೆಯ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ್‌ ನಗರ ಜಿಲ್ಲೆಯಲ್ಲಿ ಮಸೀದಿಗೆ ಹೋಗಲು ದಾರಿ ನಿರ್ಮಾಣಕ್ಕೆ ಹಿಂದೂಗಳು ಭೂಮಿ ನೀಡಿದ್ದಾರೆ. ಹಿಂದೂಗಳು ಭೂಮಿ ನೀಡಿದ್ದರಿಂದ ಮುಸ್ಲಿಮರು ನಮಾಜ್‌ಗೆಂದು ಮಸೀದಿಗೆ ಹೋಗುವುದು ಸುಲಭವಾಗಲಿದೆ.

ಮಸೀದಿಗೆ ಹೋಗಲು ಮುಸ್ಲಿಮರು ಸಂಕಷ್ಟ ಪಡುತ್ತಿದ್ದರು. ಮುಸ್ಲಿಮರ ಸಮಸ್ಯೆಗೆ ಪರಿಹಾರ ಒದಗಿಸುವ ದೃಷ್ಟಿಯಿಂದ  ಹಿಂದೂಗಳು ಭೂಮಿ ನೀಡಿದ್ದಾರೆ. ಸಂತಕಬೀರ್ ಗ್ರಾಮದ ರಾಜೇಂದ್ರ ಸಿಂಗ್‌, ಕಪಿಲ್‌ ಸಿಂಗ್‌, ಮಹೇಂದ್ರ ಸಿಂಗ್‌ ಮತ್ತು ನಕ್ಚೆಂದ್‌ ಸಿಂಗ್‌ ಅವರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ನೂರು ಮೀಟರ್ ಭೂಮಿ ದಾನ ನೀಡಿದ್ದಾರೆ ಎಂದು ಗ್ರಾಮದ ಮುಖಂಡೆ ಊರ್ಮಿಳಾ ದೇವಿ ತಿಳಿಸಿದ್ದಾರೆ.

ತವೈಪರ್‌ನಲ್ಲಿ ಮುಸ್ಲಿಮರು ನಮಾಜ್‌ಗೆ ಹೋಗುತ್ತಿದ್ದ ಮಸೀದಿ ಪಕ್ಕ ಸದಾ ಕೊಳಚೆ ನೀರು ತುಂಬಿಕೊಂಡಿರುತ್ತದೆ. 1963 ರಲ್ಲಿ ನಿರ್ಮಾಣವಾದ ಮಸೀದಿ ಸುತ್ತ ಪ್ರದೇಶದಲ್ಲಿ ಜನ ಸಂಖ್ಯೆ ಹೆಚ್ಚಿದ್ದು, ಮಸೀದಿಗೆ ಹೋಗುವ ಸಮೀಪದ ದಾರಿಯಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ಇದೀಗ ಹಿಂದೂಗಳು ಭೂಮಿ ನೀಡುವ ಮೂಲಕ ಹಿಂದೂಗಳು ಉದಾರತೆ ಮೆರೆದಿದ್ದು, ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search