• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿಗೆ ದಾರಿ ನೀಡಿ, ಸೌಹಾರ್ದತೆ ಮೆರೆದ ಹಿಂದೂಗಳು

TNN Correspondent Posted On March 1, 2018
0


0
Shares
  • Share On Facebook
  • Tweet It

ಫೈಜಬಾದ್: ಇದುವರೆಗೆ ಕೇವಲ ಹಿಂದೂ ಮುಸ್ಲಿಂ ಕೋಮು ಗಲಭೆಗೆ ಪ್ರಚಾರದಲ್ಲಿರುತ್ತಿದ್ದ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೇರಿದ ನಂತರ ಹೊಸ ಶಕೆ ಆರಂಭವಾಗಿದೆ. ಹಿಂದೂ, ಮುಸ್ಲಿಂ ಎನ್ನದೇ ಕಠಿಣ ನಿರ್ಧಾರಗಳ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿರುವ ಯೋಗಿ ಸರ್ಕಾರ, ಶಾಂತಿ, ಸೌಹಾರ್ದತೆಯನ್ನು ಸಾರುತ್ತಿದೆ. ಇನ್ನು ವಿಶ್ವದಲ್ಲೇ ಶಾಂತಿ, ಸೌಹಾರ್ದತೆ, ಸಹಕಾರ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಹಿಂದೂಗಳು ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವ ಮೂಲಕ ಸೌಹಾರ್ದತೆಯ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ್‌ ನಗರ ಜಿಲ್ಲೆಯಲ್ಲಿ ಮಸೀದಿಗೆ ಹೋಗಲು ದಾರಿ ನಿರ್ಮಾಣಕ್ಕೆ ಹಿಂದೂಗಳು ಭೂಮಿ ನೀಡಿದ್ದಾರೆ. ಹಿಂದೂಗಳು ಭೂಮಿ ನೀಡಿದ್ದರಿಂದ ಮುಸ್ಲಿಮರು ನಮಾಜ್‌ಗೆಂದು ಮಸೀದಿಗೆ ಹೋಗುವುದು ಸುಲಭವಾಗಲಿದೆ.

ಮಸೀದಿಗೆ ಹೋಗಲು ಮುಸ್ಲಿಮರು ಸಂಕಷ್ಟ ಪಡುತ್ತಿದ್ದರು. ಮುಸ್ಲಿಮರ ಸಮಸ್ಯೆಗೆ ಪರಿಹಾರ ಒದಗಿಸುವ ದೃಷ್ಟಿಯಿಂದ  ಹಿಂದೂಗಳು ಭೂಮಿ ನೀಡಿದ್ದಾರೆ. ಸಂತಕಬೀರ್ ಗ್ರಾಮದ ರಾಜೇಂದ್ರ ಸಿಂಗ್‌, ಕಪಿಲ್‌ ಸಿಂಗ್‌, ಮಹೇಂದ್ರ ಸಿಂಗ್‌ ಮತ್ತು ನಕ್ಚೆಂದ್‌ ಸಿಂಗ್‌ ಅವರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ನೂರು ಮೀಟರ್ ಭೂಮಿ ದಾನ ನೀಡಿದ್ದಾರೆ ಎಂದು ಗ್ರಾಮದ ಮುಖಂಡೆ ಊರ್ಮಿಳಾ ದೇವಿ ತಿಳಿಸಿದ್ದಾರೆ.

ತವೈಪರ್‌ನಲ್ಲಿ ಮುಸ್ಲಿಮರು ನಮಾಜ್‌ಗೆ ಹೋಗುತ್ತಿದ್ದ ಮಸೀದಿ ಪಕ್ಕ ಸದಾ ಕೊಳಚೆ ನೀರು ತುಂಬಿಕೊಂಡಿರುತ್ತದೆ. 1963 ರಲ್ಲಿ ನಿರ್ಮಾಣವಾದ ಮಸೀದಿ ಸುತ್ತ ಪ್ರದೇಶದಲ್ಲಿ ಜನ ಸಂಖ್ಯೆ ಹೆಚ್ಚಿದ್ದು, ಮಸೀದಿಗೆ ಹೋಗುವ ಸಮೀಪದ ದಾರಿಯಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ಇದೀಗ ಹಿಂದೂಗಳು ಭೂಮಿ ನೀಡುವ ಮೂಲಕ ಹಿಂದೂಗಳು ಉದಾರತೆ ಮೆರೆದಿದ್ದು, ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search