• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿಗೆ ದಾರಿ ನೀಡಿ, ಸೌಹಾರ್ದತೆ ಮೆರೆದ ಹಿಂದೂಗಳು

TNN Correspondent Posted On March 1, 2018
0


0
Shares
  • Share On Facebook
  • Tweet It

ಫೈಜಬಾದ್: ಇದುವರೆಗೆ ಕೇವಲ ಹಿಂದೂ ಮುಸ್ಲಿಂ ಕೋಮು ಗಲಭೆಗೆ ಪ್ರಚಾರದಲ್ಲಿರುತ್ತಿದ್ದ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೇರಿದ ನಂತರ ಹೊಸ ಶಕೆ ಆರಂಭವಾಗಿದೆ. ಹಿಂದೂ, ಮುಸ್ಲಿಂ ಎನ್ನದೇ ಕಠಿಣ ನಿರ್ಧಾರಗಳ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿರುವ ಯೋಗಿ ಸರ್ಕಾರ, ಶಾಂತಿ, ಸೌಹಾರ್ದತೆಯನ್ನು ಸಾರುತ್ತಿದೆ. ಇನ್ನು ವಿಶ್ವದಲ್ಲೇ ಶಾಂತಿ, ಸೌಹಾರ್ದತೆ, ಸಹಕಾರ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಹಿಂದೂಗಳು ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವ ಮೂಲಕ ಸೌಹಾರ್ದತೆಯ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ್‌ ನಗರ ಜಿಲ್ಲೆಯಲ್ಲಿ ಮಸೀದಿಗೆ ಹೋಗಲು ದಾರಿ ನಿರ್ಮಾಣಕ್ಕೆ ಹಿಂದೂಗಳು ಭೂಮಿ ನೀಡಿದ್ದಾರೆ. ಹಿಂದೂಗಳು ಭೂಮಿ ನೀಡಿದ್ದರಿಂದ ಮುಸ್ಲಿಮರು ನಮಾಜ್‌ಗೆಂದು ಮಸೀದಿಗೆ ಹೋಗುವುದು ಸುಲಭವಾಗಲಿದೆ.

ಮಸೀದಿಗೆ ಹೋಗಲು ಮುಸ್ಲಿಮರು ಸಂಕಷ್ಟ ಪಡುತ್ತಿದ್ದರು. ಮುಸ್ಲಿಮರ ಸಮಸ್ಯೆಗೆ ಪರಿಹಾರ ಒದಗಿಸುವ ದೃಷ್ಟಿಯಿಂದ  ಹಿಂದೂಗಳು ಭೂಮಿ ನೀಡಿದ್ದಾರೆ. ಸಂತಕಬೀರ್ ಗ್ರಾಮದ ರಾಜೇಂದ್ರ ಸಿಂಗ್‌, ಕಪಿಲ್‌ ಸಿಂಗ್‌, ಮಹೇಂದ್ರ ಸಿಂಗ್‌ ಮತ್ತು ನಕ್ಚೆಂದ್‌ ಸಿಂಗ್‌ ಅವರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ನೂರು ಮೀಟರ್ ಭೂಮಿ ದಾನ ನೀಡಿದ್ದಾರೆ ಎಂದು ಗ್ರಾಮದ ಮುಖಂಡೆ ಊರ್ಮಿಳಾ ದೇವಿ ತಿಳಿಸಿದ್ದಾರೆ.

ತವೈಪರ್‌ನಲ್ಲಿ ಮುಸ್ಲಿಮರು ನಮಾಜ್‌ಗೆ ಹೋಗುತ್ತಿದ್ದ ಮಸೀದಿ ಪಕ್ಕ ಸದಾ ಕೊಳಚೆ ನೀರು ತುಂಬಿಕೊಂಡಿರುತ್ತದೆ. 1963 ರಲ್ಲಿ ನಿರ್ಮಾಣವಾದ ಮಸೀದಿ ಸುತ್ತ ಪ್ರದೇಶದಲ್ಲಿ ಜನ ಸಂಖ್ಯೆ ಹೆಚ್ಚಿದ್ದು, ಮಸೀದಿಗೆ ಹೋಗುವ ಸಮೀಪದ ದಾರಿಯಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ಇದೀಗ ಹಿಂದೂಗಳು ಭೂಮಿ ನೀಡುವ ಮೂಲಕ ಹಿಂದೂಗಳು ಉದಾರತೆ ಮೆರೆದಿದ್ದು, ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search