• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಸೀದಿಗೆ ದಾರಿ ನೀಡಿ, ಸೌಹಾರ್ದತೆ ಮೆರೆದ ಹಿಂದೂಗಳು

TNN Correspondent Posted On March 1, 2018


  • Share On Facebook
  • Tweet It

ಫೈಜಬಾದ್: ಇದುವರೆಗೆ ಕೇವಲ ಹಿಂದೂ ಮುಸ್ಲಿಂ ಕೋಮು ಗಲಭೆಗೆ ಪ್ರಚಾರದಲ್ಲಿರುತ್ತಿದ್ದ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೇರಿದ ನಂತರ ಹೊಸ ಶಕೆ ಆರಂಭವಾಗಿದೆ. ಹಿಂದೂ, ಮುಸ್ಲಿಂ ಎನ್ನದೇ ಕಠಿಣ ನಿರ್ಧಾರಗಳ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿರುವ ಯೋಗಿ ಸರ್ಕಾರ, ಶಾಂತಿ, ಸೌಹಾರ್ದತೆಯನ್ನು ಸಾರುತ್ತಿದೆ. ಇನ್ನು ವಿಶ್ವದಲ್ಲೇ ಶಾಂತಿ, ಸೌಹಾರ್ದತೆ, ಸಹಕಾರ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಹಿಂದೂಗಳು ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವ ಮೂಲಕ ಸೌಹಾರ್ದತೆಯ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ್‌ ನಗರ ಜಿಲ್ಲೆಯಲ್ಲಿ ಮಸೀದಿಗೆ ಹೋಗಲು ದಾರಿ ನಿರ್ಮಾಣಕ್ಕೆ ಹಿಂದೂಗಳು ಭೂಮಿ ನೀಡಿದ್ದಾರೆ. ಹಿಂದೂಗಳು ಭೂಮಿ ನೀಡಿದ್ದರಿಂದ ಮುಸ್ಲಿಮರು ನಮಾಜ್‌ಗೆಂದು ಮಸೀದಿಗೆ ಹೋಗುವುದು ಸುಲಭವಾಗಲಿದೆ.

ಮಸೀದಿಗೆ ಹೋಗಲು ಮುಸ್ಲಿಮರು ಸಂಕಷ್ಟ ಪಡುತ್ತಿದ್ದರು. ಮುಸ್ಲಿಮರ ಸಮಸ್ಯೆಗೆ ಪರಿಹಾರ ಒದಗಿಸುವ ದೃಷ್ಟಿಯಿಂದ  ಹಿಂದೂಗಳು ಭೂಮಿ ನೀಡಿದ್ದಾರೆ. ಸಂತಕಬೀರ್ ಗ್ರಾಮದ ರಾಜೇಂದ್ರ ಸಿಂಗ್‌, ಕಪಿಲ್‌ ಸಿಂಗ್‌, ಮಹೇಂದ್ರ ಸಿಂಗ್‌ ಮತ್ತು ನಕ್ಚೆಂದ್‌ ಸಿಂಗ್‌ ಅವರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ನೂರು ಮೀಟರ್ ಭೂಮಿ ದಾನ ನೀಡಿದ್ದಾರೆ ಎಂದು ಗ್ರಾಮದ ಮುಖಂಡೆ ಊರ್ಮಿಳಾ ದೇವಿ ತಿಳಿಸಿದ್ದಾರೆ.

ತವೈಪರ್‌ನಲ್ಲಿ ಮುಸ್ಲಿಮರು ನಮಾಜ್‌ಗೆ ಹೋಗುತ್ತಿದ್ದ ಮಸೀದಿ ಪಕ್ಕ ಸದಾ ಕೊಳಚೆ ನೀರು ತುಂಬಿಕೊಂಡಿರುತ್ತದೆ. 1963 ರಲ್ಲಿ ನಿರ್ಮಾಣವಾದ ಮಸೀದಿ ಸುತ್ತ ಪ್ರದೇಶದಲ್ಲಿ ಜನ ಸಂಖ್ಯೆ ಹೆಚ್ಚಿದ್ದು, ಮಸೀದಿಗೆ ಹೋಗುವ ಸಮೀಪದ ದಾರಿಯಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ಇದೀಗ ಹಿಂದೂಗಳು ಭೂಮಿ ನೀಡುವ ಮೂಲಕ ಹಿಂದೂಗಳು ಉದಾರತೆ ಮೆರೆದಿದ್ದು, ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search