• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿಯವರ ಸ್ವಚ್ಛ ಭಾರತ ಕಲ್ಪನೆಗೆ ಮಾರು ಹೋದ ಪೋರಿ, ರಾಯಚೂರು ಸ್ವಚ್ಛ ಭಾರತ ಮಿಷನ್ ಗೆ ಈಕೆಯೇ ರೂವಾರಿ!

TNN Correspondent Posted On March 2, 2018


  • Share On Facebook
  • Tweet It

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುತ್ತಲೇ, ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸುವ ಮೂಲಕ ದೇಶವನ್ನು ಸ್ವಚ್ಛಗೊಳಿಸುವ, ಕಸದಿಂದ ಮುಕ್ತಗೊಳಿಸುವ ಕಲ್ಪನೆಗೆ ನಾಂದಿ ಹಾಡಿದರು.

ಆಗ ಕೆಲವು ಮೋದಿ ವಿರೋಧಿಗಳು , ಕಾಂಗ್ರೆಸ್ಸಿಗರೂ ಯೋಜನೆ ಬಗ್ಗೆಯೇ ತಕರಾರು ತೆಗೆದಿದ್ದರು. ಈ ಯೋಜನೆ ಯಶಸ್ವಿಯಾಗಲ್ಲ ಎಂದು ಕೊಂಕು ನುಡಿದರು. ಆದರೆ ಪ್ರಧಾನಿ ಅಂದುಕೊಂಡಿದ್ದನ್ನು ಬಿಡಲಿಲ್ಲ. ಮೋದಿ ಪ್ರೇರಣೆಯಿಂದ ಅಮಿತಾಬ್ ಬಚ್ಚನ್ ಸೇರಿ ಹಲವು ಗಣ್ಯರು ಪೊರಕೆ ಹಿಡಿದು ಬೀದಿಗೆ ಬಂದರು. ರಸ್ತೆಯ ಕಸ ಗುಡಿಸಿದರು.

ಅಷ್ಟೇ ಏಕೆ, ದೇಶದ ಪ್ರಧಾನಿಯೇ ರೋಡಿಗೆ ಬಂದು ಪೊರಕೆ ಹಿಡಿದು ನಿಂತರೆ, ಜನ ಸುಮ್ಮನಿರುತ್ತಾರೆಯೇ? ಜನರೂ ತಮ್ಮ ಸುತ್ತಲಿನ ಪ್ರದೇಶ ಸ್ವಚ್ಛಗೊಳಿಸಿದರು. ಆ ಮೂಲಕ ಪ್ರಧಾನಿ ಮೋದಿ ನೀಡಿದ ಕರೆಗೆ ಬೆಂಬಲವಾಗಿ ನಿಂತರು.

ಇಂತಹ ಸ್ವಚ್ಛ ಭಾರತ ಮಿಷನ್ ಅಥವಾ ಯೋಜನೆ ಈಗ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದಿದೆ. ಹೌದು, ರಾಯಚೂರು ಜಿಲ್ಲೆಯ ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಜಿಲ್ಲಾಡಳಿತ ಸ್ವಚ್ಛ ಭಾರತ ಮಿಷನ್ ರಾಯಚೂರು ಜಿಲ್ಲೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವ ಮೂಲಕ ಮಹತ್ತರ ನಿರ್ಧಾರ ಕೈಗೊಂಡಿದೆ.

ರಾಯಚೂರು ಜಿಲ್ಲೆಯ ಸಿರಗುಪ್ಪ ತಾಲೂಕಿನ ತಾಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿರುವ ಎಚ್.ಮಹಾಕಾಳಿಯೇ ಜಿಲ್ಲೆಯಲ್ಲಿ ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾಳೆ.

ಸ್ವಚ್ಛ ಭಾರತ ಯೋಜನೆಯಿಂದ ಪ್ರೇರಿತಳಾಗಿದ್ದ ಮಹಾಕಾಳಿ, ಮನೆ ಎದುರು ಶೌಚಾಲಯ ನಿರ್ಮಿಸಬೇಕು ಎಂದು ಪೋಷಕರಲ್ಲಿ ಒತ್ತಾಯಿಸಿದ್ದಳು. ಪೋಷಕರು ಒಪ್ಪದ ಕಾರಣ, ಎರಡು ದಿನ ಅನ್ನ, ನೀರು ಬಿಟ್ಟು ಕೊನೆಗೂ ಶೌಚಾಲಯ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಳು.

ಈ ಪುಟ್ಟ ಬಾಲಕಿಯ ಮಹೋನ್ನತ ಆಶಯ, ಸ್ವಚ್ಛ ಭಾರತ ಯೋಜನೆ, ಸ್ವಚ್ಛತೆ, ಮಹಿಳೆಯರಿಗೆ ಶೌಚಾಲಯದ ಕುರಿತು ಆಕೆಗಿರುವ ಅರಿವನ್ನು ಗುರುತಿಸಿ ಪ್ರಚಾರ ರಾಯಭಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಾಲಕಿಗೊಂದು ಸಲಾಂ.

  • Share On Facebook
  • Tweet It


- Advertisement -


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search