• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯವರ ಸ್ವಚ್ಛ ಭಾರತ ಕಲ್ಪನೆಗೆ ಮಾರು ಹೋದ ಪೋರಿ, ರಾಯಚೂರು ಸ್ವಚ್ಛ ಭಾರತ ಮಿಷನ್ ಗೆ ಈಕೆಯೇ ರೂವಾರಿ!

TNN Correspondent Posted On March 2, 2018
0


0
Shares
  • Share On Facebook
  • Tweet It

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುತ್ತಲೇ, ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸುವ ಮೂಲಕ ದೇಶವನ್ನು ಸ್ವಚ್ಛಗೊಳಿಸುವ, ಕಸದಿಂದ ಮುಕ್ತಗೊಳಿಸುವ ಕಲ್ಪನೆಗೆ ನಾಂದಿ ಹಾಡಿದರು.

ಆಗ ಕೆಲವು ಮೋದಿ ವಿರೋಧಿಗಳು , ಕಾಂಗ್ರೆಸ್ಸಿಗರೂ ಯೋಜನೆ ಬಗ್ಗೆಯೇ ತಕರಾರು ತೆಗೆದಿದ್ದರು. ಈ ಯೋಜನೆ ಯಶಸ್ವಿಯಾಗಲ್ಲ ಎಂದು ಕೊಂಕು ನುಡಿದರು. ಆದರೆ ಪ್ರಧಾನಿ ಅಂದುಕೊಂಡಿದ್ದನ್ನು ಬಿಡಲಿಲ್ಲ. ಮೋದಿ ಪ್ರೇರಣೆಯಿಂದ ಅಮಿತಾಬ್ ಬಚ್ಚನ್ ಸೇರಿ ಹಲವು ಗಣ್ಯರು ಪೊರಕೆ ಹಿಡಿದು ಬೀದಿಗೆ ಬಂದರು. ರಸ್ತೆಯ ಕಸ ಗುಡಿಸಿದರು.

ಅಷ್ಟೇ ಏಕೆ, ದೇಶದ ಪ್ರಧಾನಿಯೇ ರೋಡಿಗೆ ಬಂದು ಪೊರಕೆ ಹಿಡಿದು ನಿಂತರೆ, ಜನ ಸುಮ್ಮನಿರುತ್ತಾರೆಯೇ? ಜನರೂ ತಮ್ಮ ಸುತ್ತಲಿನ ಪ್ರದೇಶ ಸ್ವಚ್ಛಗೊಳಿಸಿದರು. ಆ ಮೂಲಕ ಪ್ರಧಾನಿ ಮೋದಿ ನೀಡಿದ ಕರೆಗೆ ಬೆಂಬಲವಾಗಿ ನಿಂತರು.

ಇಂತಹ ಸ್ವಚ್ಛ ಭಾರತ ಮಿಷನ್ ಅಥವಾ ಯೋಜನೆ ಈಗ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದಿದೆ. ಹೌದು, ರಾಯಚೂರು ಜಿಲ್ಲೆಯ ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಜಿಲ್ಲಾಡಳಿತ ಸ್ವಚ್ಛ ಭಾರತ ಮಿಷನ್ ರಾಯಚೂರು ಜಿಲ್ಲೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವ ಮೂಲಕ ಮಹತ್ತರ ನಿರ್ಧಾರ ಕೈಗೊಂಡಿದೆ.

ರಾಯಚೂರು ಜಿಲ್ಲೆಯ ಸಿರಗುಪ್ಪ ತಾಲೂಕಿನ ತಾಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿರುವ ಎಚ್.ಮಹಾಕಾಳಿಯೇ ಜಿಲ್ಲೆಯಲ್ಲಿ ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾಳೆ.

ಸ್ವಚ್ಛ ಭಾರತ ಯೋಜನೆಯಿಂದ ಪ್ರೇರಿತಳಾಗಿದ್ದ ಮಹಾಕಾಳಿ, ಮನೆ ಎದುರು ಶೌಚಾಲಯ ನಿರ್ಮಿಸಬೇಕು ಎಂದು ಪೋಷಕರಲ್ಲಿ ಒತ್ತಾಯಿಸಿದ್ದಳು. ಪೋಷಕರು ಒಪ್ಪದ ಕಾರಣ, ಎರಡು ದಿನ ಅನ್ನ, ನೀರು ಬಿಟ್ಟು ಕೊನೆಗೂ ಶೌಚಾಲಯ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಳು.

ಈ ಪುಟ್ಟ ಬಾಲಕಿಯ ಮಹೋನ್ನತ ಆಶಯ, ಸ್ವಚ್ಛ ಭಾರತ ಯೋಜನೆ, ಸ್ವಚ್ಛತೆ, ಮಹಿಳೆಯರಿಗೆ ಶೌಚಾಲಯದ ಕುರಿತು ಆಕೆಗಿರುವ ಅರಿವನ್ನು ಗುರುತಿಸಿ ಪ್ರಚಾರ ರಾಯಭಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಾಲಕಿಗೊಂದು ಸಲಾಂ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search