• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯದಲ್ಲೂ ಮೋದಿ ಮೋದಿ.. ಬಿಜೆಪಿಗೆ ಜನರ ಜೈಕಾರ, ಕೈ ನಾಮಾವಶೇಷ

TNN Correspondent Posted On March 3, 2018
0


0
Shares
  • Share On Facebook
  • Tweet It

ತ್ರಿಪುರಾದಲ್ಲಿ ಕಮಲ ಕಮಾಲ್, ಕಮ್ಯುನಿಸ್ಟರಿಗೆ ಆಘಾತ, ಕೈ ಸರ್ವನಾಶ

ಅಗರ್ತಲಾ: 25 ವರ್ಷಗಳಿಂದ ಕೆಂಪು ರಾಜಕೀಯ ಪಕ್ಷದಿಂದ ಆಡಳಿತಕ್ಕೆ ಒಳಗಾಗಿದ್ದರೂ, ಅಭಿವೃದ್ಧಿಯನ್ನು ಕಾಣದೇ ನಿತ್ಯ ಸಂಕಷ್ಟದಲ್ಲಿ ದಿನದೂಡುತ್ತಿದ್ದ ತ್ರಿಪುರಾದ ಜನರು ಇದೀಗ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. 25 ವರ್ಷಗಳ ಎಡರಂಗದ ರಾಜಕೀಯ ಇತಿಹಾಸಕ್ಕೆ ಕೊನೆ ಹಾಡಿ, ಇದೀಗ ರಾಷ್ಟ್ರದಲ್ಲಿ ಭರವಸೆ ಮೂಡಿಸಿರುವ ಕಮಲ ಪಕ್ಷಕ್ಕೆ ಭರ್ಜರಿ ಗೆಲುವು ಸಾಧಿಸಲು ಬೆಂಬಲ ನೀಡಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚಿಸಲು ಬೇಕಾದ ಸ್ಪಷ್ಟ ಬಹುಮತ ಗಳಿಸಿದ್ದು, ಈಶಾನ್ಯದ ರಾಜ್ಯದಲ್ಲಿ ಕೇಸರಿ ಅಲೆಯ ಛಾಪು ಮೂಡಿಸಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ವಿಶ್ವಾಸ ದ್ವಿಗುಣವಾಗಿದೆ ಎಂಬುದಕ್ಕೆ ಒಂದೇ ಒಂದು ಕ್ಷೇತ್ರದಲ್ಲೂ ಅಧಿಕಾರದಲ್ಲಿ ಇರದ ಬಿಜೆಪಿ ಇಡೀ ರಾಜ್ಯದ ಜನರ ವಿಶ್ವಾಸ ಪಡೆದುಕೊಂಡು ಅಧಿಕಾರದ ಗದ್ದುಗೆ ಏರುವ ಮಟ್ಟಿಗೆ ಸ್ಥಾನಗಳನ್ನು ಪಡೆಯುವ ಮೂಲಕ ಸಾಬೀತಾಗಿದೆ.

59 ಕ್ಷೇತ್ರಗಳಲ್ಲಿ ಬಿಜೆಪಿ 43 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ ಸಾಗಿದೆ. ಆದರೆ ಆಡಳಿತಾರೂಢ ಸಿಪಿಎಂ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿದ್ದು, ಎಡಪಕ್ಷಗಳ ಒಕ್ಕೂಟ ಕೇವಲ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದು, ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಹೇಳ ಹೆಸರಿಲ್ಲದ ಸ್ಥಾನಕ್ಕೆ ತಲುಪಿದೆ. 60 ವಿಧಾನ ಸಭಾ ಕ್ಷೇತ್ರಗಳಿರುವ ತ್ರಿಪುರದಲ್ಲಿ 59 ಕ್ಷೇತ್ರಗಳಲ್ಲಿ ಫೆ.18 ರಂದು ಮತದಾನ ನಡೆದಿತ್ತು.

ಕೇರಳದಲ್ಲಿ ಮಾತ್ರ ಎಡರಂಗದ ಸರ್ಕಾರ

ತ್ರಿಪುರಾದಲ್ಲಿ ಸುಮಾರು 25 ವರ್ಷಗಳ ಎಡರಂಗದ  ಆಡಳಿತಕ್ಕೆ ಕೊನೆ ಮೊಳೆ ಜನರು ಜಡಿದಿದ್ದು, ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವ ಕಳೆದುಕೊಂಡಿದ ಎಡರಂಗದವರು, ಇದೀಗ ಕೇವಲ ಕೇರಳದಲ್ಲಿ ಮಾತ್ರ ಅಧಿಕಾರ ಉಳಿಸಿಕೊಂಡಿದ್ದಾರೆ. ಕೇರಳದಲ್ಲಿ ಬದಲಾವಣೆಯ ಪರ್ವ ಬೀರಿದ್ದು, ಹೊಸ ನಿರೀಕ್ಷೆ ಮೂಡುವ ಸಂಭವವಿದೆ. ಕೇಸರಿ ಪಾಳಯಕ್ಕೆ ದೇಶದಲ್ಲಿ ತನ್ನ ವಿಸ್ತಾರವನ್ನು ಹೆಚ್ಚಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search