• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯದಲ್ಲೂ ಮೋದಿ ಮೋದಿ.. ಬಿಜೆಪಿಗೆ ಜನರ ಜೈಕಾರ, ಕೈ ನಾಮಾವಶೇಷ

TNN Correspondent Posted On March 3, 2018
0


0
Shares
  • Share On Facebook
  • Tweet It

ತ್ರಿಪುರಾದಲ್ಲಿ ಕಮಲ ಕಮಾಲ್, ಕಮ್ಯುನಿಸ್ಟರಿಗೆ ಆಘಾತ, ಕೈ ಸರ್ವನಾಶ

ಅಗರ್ತಲಾ: 25 ವರ್ಷಗಳಿಂದ ಕೆಂಪು ರಾಜಕೀಯ ಪಕ್ಷದಿಂದ ಆಡಳಿತಕ್ಕೆ ಒಳಗಾಗಿದ್ದರೂ, ಅಭಿವೃದ್ಧಿಯನ್ನು ಕಾಣದೇ ನಿತ್ಯ ಸಂಕಷ್ಟದಲ್ಲಿ ದಿನದೂಡುತ್ತಿದ್ದ ತ್ರಿಪುರಾದ ಜನರು ಇದೀಗ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. 25 ವರ್ಷಗಳ ಎಡರಂಗದ ರಾಜಕೀಯ ಇತಿಹಾಸಕ್ಕೆ ಕೊನೆ ಹಾಡಿ, ಇದೀಗ ರಾಷ್ಟ್ರದಲ್ಲಿ ಭರವಸೆ ಮೂಡಿಸಿರುವ ಕಮಲ ಪಕ್ಷಕ್ಕೆ ಭರ್ಜರಿ ಗೆಲುವು ಸಾಧಿಸಲು ಬೆಂಬಲ ನೀಡಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚಿಸಲು ಬೇಕಾದ ಸ್ಪಷ್ಟ ಬಹುಮತ ಗಳಿಸಿದ್ದು, ಈಶಾನ್ಯದ ರಾಜ್ಯದಲ್ಲಿ ಕೇಸರಿ ಅಲೆಯ ಛಾಪು ಮೂಡಿಸಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ವಿಶ್ವಾಸ ದ್ವಿಗುಣವಾಗಿದೆ ಎಂಬುದಕ್ಕೆ ಒಂದೇ ಒಂದು ಕ್ಷೇತ್ರದಲ್ಲೂ ಅಧಿಕಾರದಲ್ಲಿ ಇರದ ಬಿಜೆಪಿ ಇಡೀ ರಾಜ್ಯದ ಜನರ ವಿಶ್ವಾಸ ಪಡೆದುಕೊಂಡು ಅಧಿಕಾರದ ಗದ್ದುಗೆ ಏರುವ ಮಟ್ಟಿಗೆ ಸ್ಥಾನಗಳನ್ನು ಪಡೆಯುವ ಮೂಲಕ ಸಾಬೀತಾಗಿದೆ.

59 ಕ್ಷೇತ್ರಗಳಲ್ಲಿ ಬಿಜೆಪಿ 43 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ ಸಾಗಿದೆ. ಆದರೆ ಆಡಳಿತಾರೂಢ ಸಿಪಿಎಂ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿದ್ದು, ಎಡಪಕ್ಷಗಳ ಒಕ್ಕೂಟ ಕೇವಲ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದು, ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಹೇಳ ಹೆಸರಿಲ್ಲದ ಸ್ಥಾನಕ್ಕೆ ತಲುಪಿದೆ. 60 ವಿಧಾನ ಸಭಾ ಕ್ಷೇತ್ರಗಳಿರುವ ತ್ರಿಪುರದಲ್ಲಿ 59 ಕ್ಷೇತ್ರಗಳಲ್ಲಿ ಫೆ.18 ರಂದು ಮತದಾನ ನಡೆದಿತ್ತು.

ಕೇರಳದಲ್ಲಿ ಮಾತ್ರ ಎಡರಂಗದ ಸರ್ಕಾರ

ತ್ರಿಪುರಾದಲ್ಲಿ ಸುಮಾರು 25 ವರ್ಷಗಳ ಎಡರಂಗದ  ಆಡಳಿತಕ್ಕೆ ಕೊನೆ ಮೊಳೆ ಜನರು ಜಡಿದಿದ್ದು, ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವ ಕಳೆದುಕೊಂಡಿದ ಎಡರಂಗದವರು, ಇದೀಗ ಕೇವಲ ಕೇರಳದಲ್ಲಿ ಮಾತ್ರ ಅಧಿಕಾರ ಉಳಿಸಿಕೊಂಡಿದ್ದಾರೆ. ಕೇರಳದಲ್ಲಿ ಬದಲಾವಣೆಯ ಪರ್ವ ಬೀರಿದ್ದು, ಹೊಸ ನಿರೀಕ್ಷೆ ಮೂಡುವ ಸಂಭವವಿದೆ. ಕೇಸರಿ ಪಾಳಯಕ್ಕೆ ದೇಶದಲ್ಲಿ ತನ್ನ ವಿಸ್ತಾರವನ್ನು ಹೆಚ್ಚಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search