• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮೆಚ್ಚಿದ ಆ ಬಾಲಕಿಯ ಕಾರ್ಯ ಒಂದು ಸಾರ್ಥಕ ಕೆಲಸಕ್ಕೆ ನಾಂದಿ ಹಾಡಿತಲ್ಲ ಎಂಬುದೇ ಸ್ಫೂರ್ತಿದಾಯಕ!

TNN Correspondent Posted On March 7, 2018
0


0
Shares
  • Share On Facebook
  • Tweet It

ಬೆಂಗಳೂರು: ಒಬ್ಬ ನಾಗರಿಕ, ಒಬ್ಬ ನಾಯಕ ಹೇಗಿರಬೇಕು ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇರೆಲ್ಲೂ ಸಿಗಲಿಕ್ಕಿಲ್ಲ. ಹಾಗೆಯೇ ಒಂದು ಉತ್ತಮ ಕೆಲಸ ಹೇಗೆ ಜನಮನ್ನಣೆ ಪಡೆಯುತ್ತದೆ, ಹೇಗೆ ಬದಲಾವಣೆಗೆ ಮುನ್ನುಡಿ ಬರೆಯುತ್ತದೆ ಎಂಬುದಕ್ಕೆ ಈ ಘಟನೆಯೇ ಉದಾಹರಣೆ.

ಆಕೆಯ ಹೆಸರು ಮಲ್ಲಮ್ಮ. ಕೇವಲ 15 ವರ್ಷದ ಇ ಬಾಲಕಿ ಪ್ರಧಾನಿ ಮೋದಿ ಜಾರಿಗೊಳಿಸಿದ ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಣೆಗೊಂಡು ದೂರದ ಕೊಪ್ಪಳದ ದಾನಾಪುರ ಎಂಬ ಕುಗ್ರಾಮದ ತನ್ನ ಮನೆಯಲ್ಲಿ ಶೌಚಾಲಯ ಕಟ್ಟಿಸಬೇಕು ಎಂದು ಮೂರು ದಿನ ಹಟ ಹಿಡಿದು, ಉಪವಾಸ ಬಿದ್ದು, ಆ ಕಾರ್ಯದಲ್ಲಿ ಯಶಸ್ವಿಯಾಗಿದ್ದಳು.

ಇದನ್ನು ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಂತಹ ಬಾಲಕಿಯರು ನಮಗೆಲ್ಲ ಸ್ಫೂರ್ತಿ ಎಂದಿದ್ದರು.

ಈಗ ಮಲ್ಲಮ್ಮಳ ಈ ಕಾರ್ಯ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ದಾರಿಯಾಗಿದ್ದು, “ಸಂಡಾಸ್’’ ಎಂಬ ಚಿತ್ರ ತಂಡ ಈಗ ದಾನಾಪುರದಲ್ಲಿ ನೂರು ಶೌಚಾಲಯ ಕಟ್ಟಿಸಲು ಮುಂದಾಗಿದೆ. ಅಷ್ಟೇ ಅಲ್ಲ, ಚಿತ್ರದಲ್ಲಿ ಬಾಲನಟಿಯಾಗಿ ನಟಿಸುತ್ತಿರುವ ಪ್ರತ್ಯಕ್ಷಾ ಎಂಬ ಬಾಲಕಿ ತನಗೆ ಚಿತ್ರದಿಂದ ಬರುವ ಒಂದು ಲಕ್ಷ ರೂಪಾಯಿ ಸಂಭಾವನೆಯನ್ನು ಗ್ರಾಮದಲ್ಲಿ ಶೌಚಾಲಯ ಕಟ್ಟಿಸಲು ನೀಡಿ ಮಾನವೀಯತೆ ಹಾಗೂ ಮಾದರಿ ಕೆಲಸ ಮಾಡಲು ಮುಂದಾಗಿದ್ದಾಳೆ.

ಒಟ್ಟಿನಲ್ಲಿ ಪೊರಕೆ ಹಿಡಿದು ತಾವೇ ರಸ್ತೆ ಶುಚಿಗೊಳಿಸುವ ಮೂಲಕ ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿದ್ದ ಮೋದಿ ಅವರ ಒಂದು ನಡೆ ದೇಶಾದ್ಯಂತ ಅಭಿಯಾನವಾಗಿ ಮಾರ್ಪಟ್ಟಿದ್ದು, ಮಲ್ಲಮ್ಮ, ಪ್ರತ್ಯಕ್ಷಾ ಅವರಂತಹವರ ಸಂಖ್ಯೆ ನೂರ್ಮಡಿಯಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search