• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಪತ್ರಕರ್ತರಲ್ಲೂ ಅಲ್ಪಸಂಖ್ಯಾತರನ್ನು ಹುಡುಕಿ, ಅವರನ್ನು ಒಡೆಯುವ ಸಿದ್ದರಾಮಯ್ಯನವರೇ ನಿಮಗೆ ಜ್ಞಾನ ಇಲ್ಲವೇ?

ವಿಶಾಲ್ ಗೌಡ ಕುಶಾಲನಗರ Posted On March 7, 2018
0


0
Shares
  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾಕೆ ಹೀಗೆ? ಇವರಿಗೆ ಏನಾಗಿದೆ? ಸಮಾಜವಾದದ ತಕ್ಕಡಿ ಹಿಡಿದು ಅಧಿಕಾರಕ್ಕೆ ಬಂದ ಇವರು, ಆ ತಕ್ಕಡಿಯ ಒಂದು ಬದಿ ಅಲ್ಪಸಂಖ್ಯಾತರನ್ನೇ ಏಕೆ ಜಾಸ್ತಿ ಇಟ್ಟು ತೂಗಬೇಕು? ಯಾಕೆ ಇಂತಹ ಕೀಳು ರಾಜಕಾರಣ ಮಾಡಬೇಕು?

ಇಂತಹ ಕುತ್ಸಿತ ಮನಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರಂಭದಿಂದಲೇ ಮುನ್ನುಡಿ ಬರೆದರು. ಮುಸ್ಲಿಂ ಸಮುದಾಯದವರಿಗಷ್ಟೇ ಶಾದಿಭಾಗ್ಯ ತಂದು ಟೀಕೆಗೊಳಗಾದರು. ಒಂದೇ ಸಮುದಾಯ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಮಕ್ಕಳಲ್ಲೂ ಜಾತಿಯ ವಿಷ ಬೀಜ ಬಿತ್ತಲು ಮುಂದಾದರು.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಲ್ಲೂ ಜಾತಿ, ಅಲ್ಪಸಂಖ್ಯಾತರನ್ನು ಹುಡುಕಿ ಸೌಲಭ್ಯ ನೀಡಲು ಮುಂದಾಗಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೂಲಕ ಅಲ್ಪಸಂಖ್ಯಾತರ ಒಡೆತನದ ಮಾಧ್ಯಮ ಸಂಸ್ಥೆ ಹಾಗೂ ಪತ್ರಕರ್ತರಿಗೆ ಚುನಾವಣೆ ಹೊಸ್ತಿಲಲ್ಲಿ ಭಾರಿ ಉಡುಗೊರೆ ನೀಡಲು ಹೊರಟಿದ್ದಾರೆ.

ಅಲ್ಪಸಂಖ್ಯಾತರ ಒಡೆತನದ ಮಾಧ್ಯಮ ಸಂಸ್ಥೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು, ಹಾಗೂ ಈ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಲ್ಯಾಪ್ ಟಾಪ್, ಕ್ಯಾಮೆರಾ ಸೇರಿ ಮಾಧ್ಯಮ ಕಿಟ್ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯನವರೇ ಇಂತಹ ಒನ್ ವೇ ಯೋಜನೆಗಳನ್ನು ಜಾರಿಗೆ ತಂದು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಯಾಕೆ ಹೀಗೆ ಒಂದೇ ಸಮುದಾಯಕ್ಕೆ ಸೌಲಭ್ಯ ನೀಡಿ, ನಿಮ್ಮ ಪರ ಕೆಲಸ ಮಾಡಿ ಎಂದು ಪರೋಕ್ಷವಾಗಿ ಆಮಿಷ ಒಡ್ಡುತ್ತಿದ್ದೀರಿ? ಯಾಕೆ ಪತ್ರಕರ್ತರನ್ನೂ ನಿಮ್ಮ ಬುಟ್ಟಿಗೆ ಹಾಕಿಕೊಳ್ಳಲು ಮುಂದಾಗಿದ್ದೀರಿ? ಹೀಗೆ ಮಾಡುವ ನೀವೆಂತಹ ಜನನಾಯಕ ಸ್ವಾಮಿ?

ಖಂಡಿತ, ನೀವು ಒಬ್ಬ ಮುಖ್ಯಮಂತ್ರಿಯಾಗಿ ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ನೀಡುವುದು ಒಳ್ಳೆಯದು. ಕಳೆದ ಬಜೆಟ್ಟಿನಲ್ಲಿ ಪತ್ರಕರ್ತರಿಗೆ ವಿಮಾ ಸೌಲಭ್ಯ ನೀಡಿರುವುದು ಸಹ ಸ್ವಾಗತಾರ್ಹವೇ? ಆದರೆ ಇದೆಂತಹ ಓಲೈಕೆಯ ಯೋಜನೆ ಸ್ವಾಮಿ?

ಯಾವ ಪತ್ರಿಕಾ ಸಂಸ್ಥೆಯೂ ಜಾಹೀರಾತು ಪಡೆಯದಷ್ಟು ಸಾಮರ್ಥ್ಯ ಹೊಂದಿಲ್ಲ ಎಂದಲ್ಲ. ಯಾವ ಪತ್ರಕರ್ತರೂ ವರದಿ ಮಾಡಲು ಕ್ಯಾಮೆರಾ, ಲ್ಯಾಪ್ ಟಾಪ್, ಕಂಪ್ಯೂಟರ್ ಹೊಂದಿಲ್ಲ ಎಂದಲ್ಲ. ಹೀಗಿರುವಾಗ ಈಗ ಇರುವ ಸೌಲಭ್ಯಗಳನ್ನೇ ನೀಡಿ ನೀವು ಏನು ಸಾಧಿಸಲು ಹೊರಟಿದ್ದೀರಿ?

ನೀವೇನೋ ಅಹಿಂದ ಪರ ಮುಖ್ಯಮಂತ್ರಿ ಎಂದು ಈಗ ನಾನೂ ಹಿಂದೂ ಎಂದು ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡುತ್ತಿದ್ದೀರಿ. ಆದರೆ ನಿಮ್ಮ ಅಜೆಂಡಾಯುತ ಯೋಜನೆ ಜಾರಿಯಿಂದ ಪತ್ರಕರ್ತರು ನಿಮ್ಮ ಪರ ಕೆಲಸ ಮಾಡಬೇಕೇ? ನಿಮ್ಮನ್ನು ಹಾಡಿ ಹೊಗಳಬೇಕೆ? ಅದಕ್ಕಾಗಿಯೇ ಈ ಅಲ್ಪಸಂಖ್ಯಾತ ಪತ್ರಕರ್ತರ ಪರವಾಗಿ ಯೋಜನೆ ಜಾರಿಗೊಳಸಿದ್ದೀರಾ? ನಿಮಗೆ ಬುದ್ಧಿ, ಜ್ಞಾನ ಎರಡೂ ಇಲ್ಲವೇ ಸಿಎಂ ಅಥವಾ ನಿಮ್ಮ ಒಳಮರ್ಮ ಅರಿಯದಷ್ಟು ದಡ್ಡರೇ ಜನ?

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
ವಿಶಾಲ್ ಗೌಡ ಕುಶಾಲನಗರ January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
ವಿಶಾಲ್ ಗೌಡ ಕುಶಾಲನಗರ January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search