• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಪತ್ರಕರ್ತರಲ್ಲೂ ಅಲ್ಪಸಂಖ್ಯಾತರನ್ನು ಹುಡುಕಿ, ಅವರನ್ನು ಒಡೆಯುವ ಸಿದ್ದರಾಮಯ್ಯನವರೇ ನಿಮಗೆ ಜ್ಞಾನ ಇಲ್ಲವೇ?

ವಿಶಾಲ್ ಗೌಡ ಕುಶಾಲನಗರ Posted On March 7, 2018
0


0
Shares
  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾಕೆ ಹೀಗೆ? ಇವರಿಗೆ ಏನಾಗಿದೆ? ಸಮಾಜವಾದದ ತಕ್ಕಡಿ ಹಿಡಿದು ಅಧಿಕಾರಕ್ಕೆ ಬಂದ ಇವರು, ಆ ತಕ್ಕಡಿಯ ಒಂದು ಬದಿ ಅಲ್ಪಸಂಖ್ಯಾತರನ್ನೇ ಏಕೆ ಜಾಸ್ತಿ ಇಟ್ಟು ತೂಗಬೇಕು? ಯಾಕೆ ಇಂತಹ ಕೀಳು ರಾಜಕಾರಣ ಮಾಡಬೇಕು?

ಇಂತಹ ಕುತ್ಸಿತ ಮನಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರಂಭದಿಂದಲೇ ಮುನ್ನುಡಿ ಬರೆದರು. ಮುಸ್ಲಿಂ ಸಮುದಾಯದವರಿಗಷ್ಟೇ ಶಾದಿಭಾಗ್ಯ ತಂದು ಟೀಕೆಗೊಳಗಾದರು. ಒಂದೇ ಸಮುದಾಯ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಮಕ್ಕಳಲ್ಲೂ ಜಾತಿಯ ವಿಷ ಬೀಜ ಬಿತ್ತಲು ಮುಂದಾದರು.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಲ್ಲೂ ಜಾತಿ, ಅಲ್ಪಸಂಖ್ಯಾತರನ್ನು ಹುಡುಕಿ ಸೌಲಭ್ಯ ನೀಡಲು ಮುಂದಾಗಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೂಲಕ ಅಲ್ಪಸಂಖ್ಯಾತರ ಒಡೆತನದ ಮಾಧ್ಯಮ ಸಂಸ್ಥೆ ಹಾಗೂ ಪತ್ರಕರ್ತರಿಗೆ ಚುನಾವಣೆ ಹೊಸ್ತಿಲಲ್ಲಿ ಭಾರಿ ಉಡುಗೊರೆ ನೀಡಲು ಹೊರಟಿದ್ದಾರೆ.

ಅಲ್ಪಸಂಖ್ಯಾತರ ಒಡೆತನದ ಮಾಧ್ಯಮ ಸಂಸ್ಥೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು, ಹಾಗೂ ಈ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಲ್ಯಾಪ್ ಟಾಪ್, ಕ್ಯಾಮೆರಾ ಸೇರಿ ಮಾಧ್ಯಮ ಕಿಟ್ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯನವರೇ ಇಂತಹ ಒನ್ ವೇ ಯೋಜನೆಗಳನ್ನು ಜಾರಿಗೆ ತಂದು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಯಾಕೆ ಹೀಗೆ ಒಂದೇ ಸಮುದಾಯಕ್ಕೆ ಸೌಲಭ್ಯ ನೀಡಿ, ನಿಮ್ಮ ಪರ ಕೆಲಸ ಮಾಡಿ ಎಂದು ಪರೋಕ್ಷವಾಗಿ ಆಮಿಷ ಒಡ್ಡುತ್ತಿದ್ದೀರಿ? ಯಾಕೆ ಪತ್ರಕರ್ತರನ್ನೂ ನಿಮ್ಮ ಬುಟ್ಟಿಗೆ ಹಾಕಿಕೊಳ್ಳಲು ಮುಂದಾಗಿದ್ದೀರಿ? ಹೀಗೆ ಮಾಡುವ ನೀವೆಂತಹ ಜನನಾಯಕ ಸ್ವಾಮಿ?

ಖಂಡಿತ, ನೀವು ಒಬ್ಬ ಮುಖ್ಯಮಂತ್ರಿಯಾಗಿ ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ನೀಡುವುದು ಒಳ್ಳೆಯದು. ಕಳೆದ ಬಜೆಟ್ಟಿನಲ್ಲಿ ಪತ್ರಕರ್ತರಿಗೆ ವಿಮಾ ಸೌಲಭ್ಯ ನೀಡಿರುವುದು ಸಹ ಸ್ವಾಗತಾರ್ಹವೇ? ಆದರೆ ಇದೆಂತಹ ಓಲೈಕೆಯ ಯೋಜನೆ ಸ್ವಾಮಿ?

ಯಾವ ಪತ್ರಿಕಾ ಸಂಸ್ಥೆಯೂ ಜಾಹೀರಾತು ಪಡೆಯದಷ್ಟು ಸಾಮರ್ಥ್ಯ ಹೊಂದಿಲ್ಲ ಎಂದಲ್ಲ. ಯಾವ ಪತ್ರಕರ್ತರೂ ವರದಿ ಮಾಡಲು ಕ್ಯಾಮೆರಾ, ಲ್ಯಾಪ್ ಟಾಪ್, ಕಂಪ್ಯೂಟರ್ ಹೊಂದಿಲ್ಲ ಎಂದಲ್ಲ. ಹೀಗಿರುವಾಗ ಈಗ ಇರುವ ಸೌಲಭ್ಯಗಳನ್ನೇ ನೀಡಿ ನೀವು ಏನು ಸಾಧಿಸಲು ಹೊರಟಿದ್ದೀರಿ?

ನೀವೇನೋ ಅಹಿಂದ ಪರ ಮುಖ್ಯಮಂತ್ರಿ ಎಂದು ಈಗ ನಾನೂ ಹಿಂದೂ ಎಂದು ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡುತ್ತಿದ್ದೀರಿ. ಆದರೆ ನಿಮ್ಮ ಅಜೆಂಡಾಯುತ ಯೋಜನೆ ಜಾರಿಯಿಂದ ಪತ್ರಕರ್ತರು ನಿಮ್ಮ ಪರ ಕೆಲಸ ಮಾಡಬೇಕೇ? ನಿಮ್ಮನ್ನು ಹಾಡಿ ಹೊಗಳಬೇಕೆ? ಅದಕ್ಕಾಗಿಯೇ ಈ ಅಲ್ಪಸಂಖ್ಯಾತ ಪತ್ರಕರ್ತರ ಪರವಾಗಿ ಯೋಜನೆ ಜಾರಿಗೊಳಸಿದ್ದೀರಾ? ನಿಮಗೆ ಬುದ್ಧಿ, ಜ್ಞಾನ ಎರಡೂ ಇಲ್ಲವೇ ಸಿಎಂ ಅಥವಾ ನಿಮ್ಮ ಒಳಮರ್ಮ ಅರಿಯದಷ್ಟು ದಡ್ಡರೇ ಜನ?

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
ವಿಶಾಲ್ ಗೌಡ ಕುಶಾಲನಗರ February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
ವಿಶಾಲ್ ಗೌಡ ಕುಶಾಲನಗರ February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search