• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ವಿಧಾನಸೌಧದಲ್ಲೇ ಘರ್ಜಿಸಿದ ಯೋಗಿ ಆದಿತ್ಯನಾಥ್

TNN Correspondent Posted On March 7, 2018


  • Share On Facebook
  • Tweet It

ಲಖನೌ: ಹೋಳಿ ಹಬ್ಬದ ಸಂಭ್ರಮದ ವೇಳೆ ಪತ್ರಕರ್ತರೊಬ್ಬರು ‘ನೀವು ಕೇವಲ ಹಿಂದೂ ಹಬ್ಬಗಳನ್ನು ಮಾತ್ರ ಆಚರಿಸುತ್ತೀರಿ. ಈದ್ ಎಲ್ಲಿ ಆಚರಿಸುತ್ತೀರಿ ಎಂಬ ಪ್ರಶ್ನೆಗೆ ‘ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ಖಡಕ್ ಉತ್ತರ ನೀಡಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಮತ್ತೊಮ್ಮೆ ವಿಧಾನಸೌಧದಲ್ಲೇ ಆ ಮಾತುಗಳನ್ನು ಪುನರ್ ಉಚ್ಚರಿಸುವ ಮೂಲಕ ತಮ್ಮ ನೇರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳು ವಿಧಾನಸೌಧದಲ್ಲಿ ಪ್ರಶ್ನಿಸಿದಾಗ ‘ಅದೇ ದಾಟಿಯಲ್ಲಿ ಉತ್ತರ ನೀಡುವ ಮೂಲಕ ತಮ್ಮ ಧರ್ಮನಿಷ್ಠೆಯನ್ನು ಮೆರೆದಿದ್ದಾರೆ. ಅಲ್ಲದೇ ಭವ್ಯ ಸಂಸ್ಕೃತಿ ಹೊಂದಿರುವ ಹಿಂದೂ ಧರ್ಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಚುನಾವಣೆಗಾಗಿ ಜನಿವಾರ ಧರಿಸುವ ಹಿಂದೂ ನಾನಲ್ಲ. ನಾನು ಧರ್ಮನಿಷ್ಠ ಹಿಂದೂ. ನನಗೆ ಡೋಂಗಿ ಮಾಡಲು ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೂ ಟಾಂಗ್ ನೀಡಿದ್ದಾರೆ. ನಾನು ಅವಕಾಶವಾದಿಯಲ್ಲ.  ಒಮ್ಮೆ ಟೋಪಿ ಧರಿಸಿ, ಮತ್ತೊಮ್ಮೆ ಜನಿವಾರ ಧರಿಸಿ ನಾಟಕವಾಡುವುದು ನನಗೆ ತಿಳಿದಿಲ್ಲ. ನನ್ನ ಧರ್ಮ ಹಿಂದೂ, ನಾನು ಅದರ ಹಬ್ಬಗಳನ್ನು ಮಾತ್ರ ಆಚರಿಸುತ್ತೇನೆ ಎಂಬ ಸ್ಪಷ್ಟ ಮಾತುಗಳನ್ನಾಡುವ ಮೂಲಕ ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ.

ನಾನು ಧರ್ಮದ ರೀತಿ ರಿವಾಜುಗಳನ್ನು ಹೆಮ್ಮೆಯಿಂದ ಆಚರಿಸುತ್ತೇನೆ. ಅಲ್ಲದೇ ಇತರೆ ಧರ್ಮಗಳವರ ಆಚರಣೆಗಳನ್ನು ಗೌರವಿಸುತ್ತೇನೆ. ಆದರೆ ನಾನು ಇತರೆ ಧರ್ಮಗಳ ಹಬ್ಬಗಳನ್ನು ಆಚರಿಸುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಸ್ಪಷ್ಟ ನಿಲುವನ್ನು ಜಗತ್ತಿಗೆ ಸಾರಿದ್ದಾರೆ.

ವಿಧಾನಸೌಧದಲ್ಲಿ ಮಾತಾಡುತ್ತಾ ‘ಹೋಳಿ ಹಬ್ಬದ ವೇಳೆ ನಮಾಜ್ ಮಾಡುವ ವೇಳೆಯನ್ನು ಬದಲಾಯಿಸಿ ಹೋಳಿ ಆಚರಿಸಲು ಅನುಕೂಲ ಕಲ್ಪಿಸಿದ ಮುಸ್ಲಿಂ ಧರ್ಮಗುರುಗಳು, ಕೋಮು ಸೌಹಾರ್ದತೆಯ ಸಂದೇಶ ಸಾರಿದಕ್ಕೆ ಧನ್ಯವಾದಗಳನ್ನು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search