• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ವಿಧಾನಸೌಧದಲ್ಲೇ ಘರ್ಜಿಸಿದ ಯೋಗಿ ಆದಿತ್ಯನಾಥ್

TNN Correspondent Posted On March 7, 2018
0


0
Shares
  • Share On Facebook
  • Tweet It

ಲಖನೌ: ಹೋಳಿ ಹಬ್ಬದ ಸಂಭ್ರಮದ ವೇಳೆ ಪತ್ರಕರ್ತರೊಬ್ಬರು ‘ನೀವು ಕೇವಲ ಹಿಂದೂ ಹಬ್ಬಗಳನ್ನು ಮಾತ್ರ ಆಚರಿಸುತ್ತೀರಿ. ಈದ್ ಎಲ್ಲಿ ಆಚರಿಸುತ್ತೀರಿ ಎಂಬ ಪ್ರಶ್ನೆಗೆ ‘ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ಖಡಕ್ ಉತ್ತರ ನೀಡಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಮತ್ತೊಮ್ಮೆ ವಿಧಾನಸೌಧದಲ್ಲೇ ಆ ಮಾತುಗಳನ್ನು ಪುನರ್ ಉಚ್ಚರಿಸುವ ಮೂಲಕ ತಮ್ಮ ನೇರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳು ವಿಧಾನಸೌಧದಲ್ಲಿ ಪ್ರಶ್ನಿಸಿದಾಗ ‘ಅದೇ ದಾಟಿಯಲ್ಲಿ ಉತ್ತರ ನೀಡುವ ಮೂಲಕ ತಮ್ಮ ಧರ್ಮನಿಷ್ಠೆಯನ್ನು ಮೆರೆದಿದ್ದಾರೆ. ಅಲ್ಲದೇ ಭವ್ಯ ಸಂಸ್ಕೃತಿ ಹೊಂದಿರುವ ಹಿಂದೂ ಧರ್ಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಚುನಾವಣೆಗಾಗಿ ಜನಿವಾರ ಧರಿಸುವ ಹಿಂದೂ ನಾನಲ್ಲ. ನಾನು ಧರ್ಮನಿಷ್ಠ ಹಿಂದೂ. ನನಗೆ ಡೋಂಗಿ ಮಾಡಲು ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೂ ಟಾಂಗ್ ನೀಡಿದ್ದಾರೆ. ನಾನು ಅವಕಾಶವಾದಿಯಲ್ಲ.  ಒಮ್ಮೆ ಟೋಪಿ ಧರಿಸಿ, ಮತ್ತೊಮ್ಮೆ ಜನಿವಾರ ಧರಿಸಿ ನಾಟಕವಾಡುವುದು ನನಗೆ ತಿಳಿದಿಲ್ಲ. ನನ್ನ ಧರ್ಮ ಹಿಂದೂ, ನಾನು ಅದರ ಹಬ್ಬಗಳನ್ನು ಮಾತ್ರ ಆಚರಿಸುತ್ತೇನೆ ಎಂಬ ಸ್ಪಷ್ಟ ಮಾತುಗಳನ್ನಾಡುವ ಮೂಲಕ ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ.

ನಾನು ಧರ್ಮದ ರೀತಿ ರಿವಾಜುಗಳನ್ನು ಹೆಮ್ಮೆಯಿಂದ ಆಚರಿಸುತ್ತೇನೆ. ಅಲ್ಲದೇ ಇತರೆ ಧರ್ಮಗಳವರ ಆಚರಣೆಗಳನ್ನು ಗೌರವಿಸುತ್ತೇನೆ. ಆದರೆ ನಾನು ಇತರೆ ಧರ್ಮಗಳ ಹಬ್ಬಗಳನ್ನು ಆಚರಿಸುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಸ್ಪಷ್ಟ ನಿಲುವನ್ನು ಜಗತ್ತಿಗೆ ಸಾರಿದ್ದಾರೆ.

ವಿಧಾನಸೌಧದಲ್ಲಿ ಮಾತಾಡುತ್ತಾ ‘ಹೋಳಿ ಹಬ್ಬದ ವೇಳೆ ನಮಾಜ್ ಮಾಡುವ ವೇಳೆಯನ್ನು ಬದಲಾಯಿಸಿ ಹೋಳಿ ಆಚರಿಸಲು ಅನುಕೂಲ ಕಲ್ಪಿಸಿದ ಮುಸ್ಲಿಂ ಧರ್ಮಗುರುಗಳು, ಕೋಮು ಸೌಹಾರ್ದತೆಯ ಸಂದೇಶ ಸಾರಿದಕ್ಕೆ ಧನ್ಯವಾದಗಳನ್ನು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search