• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ವಿಧಾನಸೌಧದಲ್ಲೇ ಘರ್ಜಿಸಿದ ಯೋಗಿ ಆದಿತ್ಯನಾಥ್

TNN Correspondent Posted On March 7, 2018
0


0
Shares
  • Share On Facebook
  • Tweet It

ಲಖನೌ: ಹೋಳಿ ಹಬ್ಬದ ಸಂಭ್ರಮದ ವೇಳೆ ಪತ್ರಕರ್ತರೊಬ್ಬರು ‘ನೀವು ಕೇವಲ ಹಿಂದೂ ಹಬ್ಬಗಳನ್ನು ಮಾತ್ರ ಆಚರಿಸುತ್ತೀರಿ. ಈದ್ ಎಲ್ಲಿ ಆಚರಿಸುತ್ತೀರಿ ಎಂಬ ಪ್ರಶ್ನೆಗೆ ‘ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ಖಡಕ್ ಉತ್ತರ ನೀಡಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಮತ್ತೊಮ್ಮೆ ವಿಧಾನಸೌಧದಲ್ಲೇ ಆ ಮಾತುಗಳನ್ನು ಪುನರ್ ಉಚ್ಚರಿಸುವ ಮೂಲಕ ತಮ್ಮ ನೇರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳು ವಿಧಾನಸೌಧದಲ್ಲಿ ಪ್ರಶ್ನಿಸಿದಾಗ ‘ಅದೇ ದಾಟಿಯಲ್ಲಿ ಉತ್ತರ ನೀಡುವ ಮೂಲಕ ತಮ್ಮ ಧರ್ಮನಿಷ್ಠೆಯನ್ನು ಮೆರೆದಿದ್ದಾರೆ. ಅಲ್ಲದೇ ಭವ್ಯ ಸಂಸ್ಕೃತಿ ಹೊಂದಿರುವ ಹಿಂದೂ ಧರ್ಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಚುನಾವಣೆಗಾಗಿ ಜನಿವಾರ ಧರಿಸುವ ಹಿಂದೂ ನಾನಲ್ಲ. ನಾನು ಧರ್ಮನಿಷ್ಠ ಹಿಂದೂ. ನನಗೆ ಡೋಂಗಿ ಮಾಡಲು ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೂ ಟಾಂಗ್ ನೀಡಿದ್ದಾರೆ. ನಾನು ಅವಕಾಶವಾದಿಯಲ್ಲ.  ಒಮ್ಮೆ ಟೋಪಿ ಧರಿಸಿ, ಮತ್ತೊಮ್ಮೆ ಜನಿವಾರ ಧರಿಸಿ ನಾಟಕವಾಡುವುದು ನನಗೆ ತಿಳಿದಿಲ್ಲ. ನನ್ನ ಧರ್ಮ ಹಿಂದೂ, ನಾನು ಅದರ ಹಬ್ಬಗಳನ್ನು ಮಾತ್ರ ಆಚರಿಸುತ್ತೇನೆ ಎಂಬ ಸ್ಪಷ್ಟ ಮಾತುಗಳನ್ನಾಡುವ ಮೂಲಕ ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ.

ನಾನು ಧರ್ಮದ ರೀತಿ ರಿವಾಜುಗಳನ್ನು ಹೆಮ್ಮೆಯಿಂದ ಆಚರಿಸುತ್ತೇನೆ. ಅಲ್ಲದೇ ಇತರೆ ಧರ್ಮಗಳವರ ಆಚರಣೆಗಳನ್ನು ಗೌರವಿಸುತ್ತೇನೆ. ಆದರೆ ನಾನು ಇತರೆ ಧರ್ಮಗಳ ಹಬ್ಬಗಳನ್ನು ಆಚರಿಸುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಸ್ಪಷ್ಟ ನಿಲುವನ್ನು ಜಗತ್ತಿಗೆ ಸಾರಿದ್ದಾರೆ.

ವಿಧಾನಸೌಧದಲ್ಲಿ ಮಾತಾಡುತ್ತಾ ‘ಹೋಳಿ ಹಬ್ಬದ ವೇಳೆ ನಮಾಜ್ ಮಾಡುವ ವೇಳೆಯನ್ನು ಬದಲಾಯಿಸಿ ಹೋಳಿ ಆಚರಿಸಲು ಅನುಕೂಲ ಕಲ್ಪಿಸಿದ ಮುಸ್ಲಿಂ ಧರ್ಮಗುರುಗಳು, ಕೋಮು ಸೌಹಾರ್ದತೆಯ ಸಂದೇಶ ಸಾರಿದಕ್ಕೆ ಧನ್ಯವಾದಗಳನ್ನು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search