• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿದ್ದರಾಮಯ್ಯ ಕ್ಷೇತ್ರದಲ್ಲೇ ಸೌಲಭ್ಯಕ್ಕಾಗಿ ಬೀದಿಗಿಳಿದ ವಿದ್ಯಾರ್ಥಿಗಳು, ಇದೇ ಅಲ್ಲವೇ ದಾರಿದ್ರ್ಯ

TNN Correspondent Posted On March 7, 2018
0


0
Shares
  • Share On Facebook
  • Tweet It

ಮೈಸೂರು: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಯ ಸಾಕಾರಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಯಶಸ್ವಿಗೆ ಕಾರಣೀಭೂತರಾಗಿದ್ದಾರೆ. ಆದರೆ ರಾಜ್ಯದಲ್ಲಿ ಮಾತ್ರ ಸ್ವಚ್ಛ ಭಾರತ ಕಲ್ಪನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಮರಿಚಿಕೆಯಾದಂತಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರತಿನಿಧಿಸುವ ಮೈಸೂರು ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿಗಳು ಶೌಚಾಗೃಹಕ್ಕಾಗಿ ಪರದಾಡಿ, ಬೇಸತ್ತು ಇದೀಗ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿ ನಿಂತಿದೆ. ಅಲ್ಲದೇ ಸ್ವಚ್ಛ ಭಾರತ ಕಲ್ಪನೆಯನ್ನು ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮಣ್ಣು ಪಾಲು ಮಾಡಲಾಗಿದೆ ಎಂಬುದು ಸಾಬೀತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶೌಚಾಲಯ ಸೇರಿ ಸೂಕ್ತ ಸೌಲಭ್ಯ ಒದಗಿಸಲು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಶಾಲೆಗೆ ಸೂಕ್ತ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬಿಸಿಲಿನಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಶಾಲೆಯಲ್ಲಿ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳು ಇಲ್ಲ. ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಬಯಲು ಬಹಿರ್ದೆಸೆಗೆ ಹೋಗಲು ಮುಜುಗರ ಮತ್ತು ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಾಲೆಗೆ ಬೀಗ ಹಾಕಿ ಬಿಸಿಲಲ್ಲಿ ಕೂತು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ಜಿಲ್ಲೆಯ, ಕ್ಷೇತ್ರ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದಿರುವುದು ದುರಂತ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೂಡಲೇ ಸೂಕ್ತ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search