• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೌರವ ನೀಡದ್ದಕ್ಕೆ ಸೈನಿಕನಿಗೆ ದಂಡ ವಿಧಿಸಿದ್ದರಿಂದ ಅಸಮಾಧಾನಗೊಂಡ ಮೋದಿ ಏನು ಮಾಡಿದರು ಗೊತ್ತೇ?

TNN Correspondent Posted On March 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ. ಅವರು ದೇಶವನ್ನುಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಪ್ರೀತಿಯನ್ನು ಗಡಿ ಕಾಯುವ ಸೈನಿಕರ ಮೇಲೆ ಇಟ್ಟಿದ್ದಾರೆ. ಇದೇ ಕಾರಣಕ್ಕೆ ಮೋದಿ ಅವರು ದೀಪಾವಳಿಯನ್ನು ಸೈನಿಕರ ಜತೆ ಆಚರಿಸುತ್ತಾರೆ. ಕಳೆದ ವರ್ಷ ಆಚರಿಸಿದ್ದಾರೆ ಸಹ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಮೇಲೆ ತಮಗೆಷ್ಟು ಗೌರವ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಶ್ರೀ (ಹಾನರೇಬಲ್) ಎಂದು ಸಂಬೋಧಿಸದ ಬಿಎಸ್ಎಫ್ ಯೋಧರೊಬ್ಬರಿಗೆ ಸೈನ್ಯ ವಿಧಿಸಿದ ದಂಡದ ಆದೇಶವನ್ನು ತೆರವುಗೊಳಿಸಿ ಎಂದು ಮೋದಿ ಅವರು ನಿರ್ದೇಶನ ನೀಡಿದ್ದಾರೆ.

ಹೌದು, ಫೆ.21ರಂದು ಪಶ್ಚಿಮ ಬಂಗಾಳದ ಮಹಾತ್ಪುರ ಎಂಬಲ್ಲಿ ನಡೆದ 15ನೇ ಬೆಟಾಲಿಯನ್ನಿನ ಪರೇಡ್ ವೇಳೆ ಬಿಎಸ್ಎಫ್ ಯೋಧ ಸಂಜೀವ್ ಕುಮಾರ್ ಅವರು ಪ್ರಧಾನಿಗೆ ಶ್ರೀ ಎಂದು ಹೇಳದ ಕಾರಣ, ಮೋದಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಯೋಧರಿಗೆ 7 ದಿನದ ಸಂಬಳವನ್ನು ದಂಡದ ರೂಪದಲ್ಲಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನು ತಿಳಿದ ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದು, ಯೋಧನಿಗೆ ವಿಧಿಸಿರುವ ದಂಡ ಅಥವಾ ಶಿಕ್ಷೆಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ. ಕೆಲವು ಸೂಕ್ಷ್ಮ ವಿಚಾರಗಳಲ್ಲೂ ಮೋದಿ ಅವರು ಎಷ್ಟೊಂದು ದೊಡ್ಡ ಮಟ್ಟದಲ್ಲಿ ಯೋಚಿಸುತ್ತಾರೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಸಿಗಲಿಕ್ಕಿಲ್ಲ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search