• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭದ್ರತಾ ವೈಪಲ್ಯ, ಗ್ರೇನೆಡ್ ನೊಂದಿಗೆ ಕೇರಳ ವಿಧಾನ ಸಭೆ ಪ್ರವೇಶಿಸಿದ ಕಾಂಗ್ರೆಸ್ ಶಾಸಕ

TNN Correspondent Posted On March 8, 2018


  • Share On Facebook
  • Tweet It

ತಿರುವನಂತಪುರಂ: ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರದ ಗುಂಡಾ ಪ್ರವೃತಿ ಹೆಚ್ಚುತ್ತಿರುವುದು, ಹತ್ಯೆ, ಕೊಲೆ, ಅತ್ಯಾಚಾರ ನಡೆಯುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಗುಂಡಾಗಳ ಧರ್ಪ ಮಿತಿ ಮೀರುತ್ತಿದೆ. ಕಾಂಗ್ರೆಸ್ಸಿಗರ ಧರ್ಪದ ನಡೆ ಕೇವಲ ರಾಜ್ಯಕಷ್ಟೇ ಅಲ್ಲ, ದೇಶಕ್ಕೆ ಹರಡಿದೆ ಎಂಬುದಕ್ಕೆ ಕೇರಳದ ವಿಧಾನಸಭೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಶಾಸಕನೊಬ್ಬ ಗ್ರೇನೆಡ್ ನೊಂದಿಗೆ ವಿಧಾನಸಭೆ ಪ್ರವೇಶಿಸುವ ಮೂಲಕ ಆಘಾತಕಾರಿ ನಡೆ ಪ್ರದರ್ಶಿಸಿದ್ದಾರೆ. ಆದರೆ ಗ್ರೇನೆಡ್ ತೆಗೆದುಕೊಂಡು ಹೋದರೂ ವಿಧಾನಸಭೆಗೆ ಪ್ರವೇಶಿಸಿರುವ ಬಗ್ಗೆ ಭದ್ರತಾ ಅಧಿಕಾರಿಗಳಿಗೆ ಪತ್ತೆಯಾಗದಿರುವುದು ಭದ್ರತಾ ವೈಪಲ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.

ಮಾಜಿ ಗೃಹ ಸಚಿವ ಮತ್ತು ಕಾಂಗ್ರೆಸ್ ಶಾಸಕ ತಿರುವಂಚೂರು ರಾಧಾಕೃಷ್ಣನ್  ಗ್ರೆನೇಡ್ ಶೆಲ್ ಗಳನ್ನು ವಿಧಾನಸಭೆಯೊಳಗೆ ತೆಗೆದುಕೊಂಡು ಬಂದವರು. ಕಳೆದ ವಾರ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಬಳಸುತ್ತಿದ್ದ ಗ್ರೇನೆಡ್ ಗಳನ್ನು ಜೊತೆಗೆ ತೆಗೆದುಕೊಂಡು ಬಂದಿದ್ದಾರೆ.

ಗ್ರೇನೆಡ್ ನೊಂದಿಗೆ ವಿಧಾನಸಭೆ ಪ್ರವೇಶಿಸಿ ನಿಯಮ ಮೀರಿದಂತಾಗಿದೆ. ಜೀವಂತ ಗ್ರೇನೆಡ್ ವಿಧಾನಸಭೆಯೊಳಗೆ ತೆಗೆದುಕೊಂಡು ಬಂದಿರುವುದು ವಿಧಾನಸಭೆಯ ಭದ್ರತೆಗೆ ಆತಂಕ ಮೂಡಿಸಿದೆ ಎಂದು ಸರ್ಕಾರ ಮತ್ತು ಕಾಂಗ್ರೆಸ್ಸೇತರ ಪಕ್ಷಗಳು ತೀವ್ರ ವಿರೋಧ  ವ್ಯಕ್ತಪಡಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ‘ಅದು ಜೀವಂತ ಗ್ರೇನೆಡ್ ಆಗಿದ್ದರೇ ತೀವ್ರ ಭದ್ರತಾ ಆತಂಕ ಸೃಷ್ಟಿಸುತ್ತಿದೆ ಎಂದು ಹೇಳಿ, ಕೈ ತೊಳೆದುಕೊಂಡಿದ್ದಾರೆ. ಅಧಿಕಾರಿಗಳು ಗ್ರೇನೆಡ್ ವಶಕ್ಕೆ ಪಡೆದುಕೊಂಡಿದ್ದಾರೆ.

‘ಗ್ರೇನೆಡ್ ಗಳು ಹಳೆಯದಾಗಿದ್ದು, ದಿನಾಂಕ ಮೀರಿದ ಗ್ರೇನೆಡ್ ಗಳನ್ನು ಬಳಸಲಾಗುತ್ತಿದೆ. ಆದ್ದರಿಂದ ಇಂತಹ ಗ್ರೇನೆಡ್ ಬಳಕೆಯಿಂದ ಪ್ರತಿಭಟನಾಕಾರರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಅದನ್ನು ತೋರಿಸಲು ಗ್ರೇನೆಡ್ ವಿಧಾನಸಭೆಗೆ ತೆಗೆದುಕೊಂಡು ಬಂದಿದ್ದೇನೆ ಎಂದು ಶಾಸಕ ರಾಧಾಕೃಷ್ಣನ್ ಸಬೂಬು ಹೇಳಿದ್ದಾರೆ.

‘ರಾಧಾಕೃಷ್ಣನ್ ಅವರು ಗ್ರೇನೆಡ್ ನೊಂದಿಗೆ ವಿಧಾನಸಭೆ ಪ್ರವೇಶಿಸಿರುವುದು ಸದನದ ನಿಯಮ ಮೀರಿದಂತೆ. ಈ ಕುರಿತು ಸೂಕ್ತ ತನಿಖೆ ಮತ್ತು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಪಿ ರಾಮಕೃಷ್ಣನ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search