• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು, ಶತಾಬ್ದಿ ರೈಲಿನಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಕ

TNN Correspondent Posted On March 8, 2018
0


0
Shares
  • Share On Facebook
  • Tweet It

ಮುಂಬೈ: ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮಹಿಳೆಯರಿಗೆ ನಾನಾ ಕ್ಷೇತ್ರದಲ್ಲಿ ನೂತನ ಅವಕಾಶವನ್ನು ನೀಡಿದೆ. ರೈಲ್ವೆ ಇಲಾಖೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಟ್ಟಿದ್ದು, ಮುಂಬೈ ಅಹಮದಾಬಾದ್ ಶತಾಬ್ದಿ ಎಕ್ಸಪ್ರೇಸ್ ರೈಲಿನಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸಲು ಆರಂಭಿಸಿದ್ದಾರೆ. ಭಾರತದ ರೈಲ್ವೆ ಇಲಾಖೆ ಇತಿಹಾಸದಲ್ಲಿ ಇದು ನೂತನ ಪ್ರಯೋಗವಾಗಿದೆ. ಹೆಚ್ಚಾಗಿ ಪ್ಲಾಟ್ ಫಾರ್ಮ್ ಟಿಕೆಟ್ ಪರಿಶೀಲನೆಗೆ ಸಿಮೀತವಾಗಿದ್ದ ಮಹಿಳೆ ಟಿಕೆಟ್ ಪರಿಶೀಲಕರನ್ನು ಇದೀಗ ರೈಲ್ವೆ ಟಿಕೆಟ್ ಪರಿಶೀಲಕರಾಗಿ ನೇಮಿಸಲಾಗಿದೆ ಎನ್ನುತ್ತಾರೆ ಪಶ್ಚಿಮ ವಲಯ ರೈಲ್ವೆ ಕಮಿಷನರ್ ಆರತಿ ಸಿಂಗ್ ಪರಿಹರ್.

ಈ ಕುರಿತು ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ರೈಲ್ವೆ ಇಲಾಖೆ ನಿರ್ದೇಶಕ ವೇದ್ ಪ್ರಕಾಶ ‘ಈ ನಿರ್ಧಾರ ಮಹಿಳಾ ಸಬಲೀಕರಣದತ್ತ ಒಂದು ದೃಢ ಹೆಜ್ಜೆ. ಇದುವರೆಗೆ ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಕೇವಲ ಇಬ್ಬರು ಮಹಿಳಾ ಟಿಕೆಟ್ ಪರಿಶೀಲಕರಿದ್ದರು. ಇದೀಗ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶತಾಬ್ದಿ ರೈಲು ಮುಂಬೈ ಅಹಮದಾಬಾದ್ ಮಧ್ಯೆ 492 ಕಿಮೀ ಸಂಚರಿಸುತ್ತದೆ. ಪ್ರತಿ ಮಹಿಳಾ ಸಿಬ್ಬಂದಿ 6 ಗಂಟೆ 20 ನಿಮಿಷ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಚೈಪುರ ರೈಲು ನಿಲ್ದಾಣವನ್ನು ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಿಸುವ ಮೂಲಕ ಮಹಿಳೆಯರಿಗೆ ಭರ್ಜರಿ ಕೊಡುಗೆ ಕೇಂದ್ರ ರೈಲ್ವೆ ಇಲಾಖೆ ನೀಡಿತ್ತು. ಅಲ್ಲದೇ ಮುಂಬೈನ ಮುತ್ತುಂಗ್ ರೈಲ್ವೆ ನಿಲ್ದಾಣದಲ್ಲೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ, ಮಹಿಳಾ ಸಶಕ್ತಿಕರಣಕ್ಕೆ ರೈಲ್ವೆ ಇಲಾಖೆ ಕೊಡುಗೆ ನೀಡಿತ್ತು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search