• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು, ಶತಾಬ್ದಿ ರೈಲಿನಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಕ

TNN Correspondent Posted On March 8, 2018


  • Share On Facebook
  • Tweet It

ಮುಂಬೈ: ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮಹಿಳೆಯರಿಗೆ ನಾನಾ ಕ್ಷೇತ್ರದಲ್ಲಿ ನೂತನ ಅವಕಾಶವನ್ನು ನೀಡಿದೆ. ರೈಲ್ವೆ ಇಲಾಖೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಟ್ಟಿದ್ದು, ಮುಂಬೈ ಅಹಮದಾಬಾದ್ ಶತಾಬ್ದಿ ಎಕ್ಸಪ್ರೇಸ್ ರೈಲಿನಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸಲು ಆರಂಭಿಸಿದ್ದಾರೆ. ಭಾರತದ ರೈಲ್ವೆ ಇಲಾಖೆ ಇತಿಹಾಸದಲ್ಲಿ ಇದು ನೂತನ ಪ್ರಯೋಗವಾಗಿದೆ. ಹೆಚ್ಚಾಗಿ ಪ್ಲಾಟ್ ಫಾರ್ಮ್ ಟಿಕೆಟ್ ಪರಿಶೀಲನೆಗೆ ಸಿಮೀತವಾಗಿದ್ದ ಮಹಿಳೆ ಟಿಕೆಟ್ ಪರಿಶೀಲಕರನ್ನು ಇದೀಗ ರೈಲ್ವೆ ಟಿಕೆಟ್ ಪರಿಶೀಲಕರಾಗಿ ನೇಮಿಸಲಾಗಿದೆ ಎನ್ನುತ್ತಾರೆ ಪಶ್ಚಿಮ ವಲಯ ರೈಲ್ವೆ ಕಮಿಷನರ್ ಆರತಿ ಸಿಂಗ್ ಪರಿಹರ್.

ಈ ಕುರಿತು ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ರೈಲ್ವೆ ಇಲಾಖೆ ನಿರ್ದೇಶಕ ವೇದ್ ಪ್ರಕಾಶ ‘ಈ ನಿರ್ಧಾರ ಮಹಿಳಾ ಸಬಲೀಕರಣದತ್ತ ಒಂದು ದೃಢ ಹೆಜ್ಜೆ. ಇದುವರೆಗೆ ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಕೇವಲ ಇಬ್ಬರು ಮಹಿಳಾ ಟಿಕೆಟ್ ಪರಿಶೀಲಕರಿದ್ದರು. ಇದೀಗ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶತಾಬ್ದಿ ರೈಲು ಮುಂಬೈ ಅಹಮದಾಬಾದ್ ಮಧ್ಯೆ 492 ಕಿಮೀ ಸಂಚರಿಸುತ್ತದೆ. ಪ್ರತಿ ಮಹಿಳಾ ಸಿಬ್ಬಂದಿ 6 ಗಂಟೆ 20 ನಿಮಿಷ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಚೈಪುರ ರೈಲು ನಿಲ್ದಾಣವನ್ನು ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಿಸುವ ಮೂಲಕ ಮಹಿಳೆಯರಿಗೆ ಭರ್ಜರಿ ಕೊಡುಗೆ ಕೇಂದ್ರ ರೈಲ್ವೆ ಇಲಾಖೆ ನೀಡಿತ್ತು. ಅಲ್ಲದೇ ಮುಂಬೈನ ಮುತ್ತುಂಗ್ ರೈಲ್ವೆ ನಿಲ್ದಾಣದಲ್ಲೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ, ಮಹಿಳಾ ಸಶಕ್ತಿಕರಣಕ್ಕೆ ರೈಲ್ವೆ ಇಲಾಖೆ ಕೊಡುಗೆ ನೀಡಿತ್ತು.

  • Share On Facebook
  • Tweet It


- Advertisement -


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search