• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ರಾಜ್ಯಗಳಲ್ಲಿ ಸೋಲುಂಡು ಹತಾಶರಾದ ರಾಹುಲ್ ಗಾಂಧಿ ಮತ್ತೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಗೊತ್ತಾ?

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಪಾಪ ರಾಹುಲ್ ಗಾಂಧಿಯವರ ನಸೀಬು ಅಷ್ಟರಮಟ್ಟಿಗೆ ಕೆಟ್ಟಿದೆಯೋ ಅಥವಾ ಅವರು ನಾಯಕರಲ್ಲ ಎಂದು ತೀರ್ಮಾನಿಸಿದ್ದಾರೋ ಗೊತ್ತಿಲ್ಲ, ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ ಪ್ರತ್ಯಕ್ಷವಾಗಿ ಕಾಂಗ್ರೆಸ್ಸಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಹುಲ್ ಗಾಂಧಿಯವರ ಮೇಲೆಯೇ ಆಗುತ್ತಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಗುಜರಾತಿನಲ್ಲಿ ಕಾಂಗ್ರೆಸ್ಸಿಗೆ ಸೋಲಾಯಿತು, ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಕೈಯಿಂದ ಜಾರಿತು. ಅಷ್ಟೇ ಏಕೆ, ಮೊನ್ನೆಯಷ್ಟೇ ನಡೆದ ತ್ರಿಪುರಾ, ನಾಗಾಲೆಂಡ್, ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಅಪಾರ ಹಿನ್ನಡೆಯಾಯಿತು. ಒಟ್ಟಿನಲ್ಲಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದತ್ತ ದೇಶ ಮುನ್ನಡೆಯುತ್ತಿದೆ ಎಂಬುದೂ ಖಾತ್ರಿಯಾಯಿತು.

ಆದರೆ ಹೀಗೆ, ಕಾಂಗ್ರೆಸ್ ಸಾಲು ಸಾಲು ಚುನಾವಣೆಗಳಲ್ಲಿ ಸೋತು ಸುಣ್ಣವಾಗುತ್ತಿರುವುದು ರಾಹುಲ್ ಗಾಂಧಿಯವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆಯೇ? ಈ ಸೋಲಿನಿಂದ ರಾಹುಲ್ ಹತಾಶರಾಗಿದ್ದಾರೆಯೇ? ತಮ್ಮ ಮೇಲೆಯೇ ತಾವು ನಂಬಿಕೆ ಕಳೆದುಕೊಂಡಿದ್ದಾರೆಯೇ ಎಂಬ ಅನುಮಾನ ಕಾಡಲು ಶುರುವಾಗಿದೆ.

ಅದಕ್ಕೆ ಕಾರಣಗಳೂ ಇವೆ, ತ್ರಿಪುರಾ, ನಾಗಾಲೆಂಡ್ ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಕೂಡಲೇ ರಾಹುಲ್ ಗಾಂಧಿಯವರು ಇಟಲಿ ಪ್ರವಾಸ ಮಾಡಿದರು. ಎಲ್ಲರೂ ಸೋಲಿನಿಂದ ಹತಾಶರಾಗಿಯೇ ರಾಹುಲ್ ಗಾಂಧಿ ಇಟಲಿ ಪ್ರವಾಸ ಮಾಡಿದ್ದಾರೆ ಎಂದು ಸಹ ಟೀಕಿಸಿದರು.

ಇಂತಹ ಟೀಕೆಗೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ಇಟಲಿಯಿಂದ ಆಗಮಿಸಿರುವ ರಾಹುಲ್ ಗಾಂಧಿ ಇಂದಿನಿಂದ (ಮಾ.8) ಮಾರ್ಚ್ 12ರವರೆಗೆ ಸಿಂಗಾಪುರ ಹಾಗೂ ಮಲೇಷ್ಯಾ ಪ್ರವಾಸ ಕೈಗೊಂಡಿದ್ದು, ರಾಹುಲ್ ಸೋಲಿನಿಂದ ಕಂಗೆಟ್ಟು ಹೀಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search