• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ರಾಜ್ಯಗಳಲ್ಲಿ ಸೋಲುಂಡು ಹತಾಶರಾದ ರಾಹುಲ್ ಗಾಂಧಿ ಮತ್ತೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಗೊತ್ತಾ?

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಪಾಪ ರಾಹುಲ್ ಗಾಂಧಿಯವರ ನಸೀಬು ಅಷ್ಟರಮಟ್ಟಿಗೆ ಕೆಟ್ಟಿದೆಯೋ ಅಥವಾ ಅವರು ನಾಯಕರಲ್ಲ ಎಂದು ತೀರ್ಮಾನಿಸಿದ್ದಾರೋ ಗೊತ್ತಿಲ್ಲ, ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ ಪ್ರತ್ಯಕ್ಷವಾಗಿ ಕಾಂಗ್ರೆಸ್ಸಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಹುಲ್ ಗಾಂಧಿಯವರ ಮೇಲೆಯೇ ಆಗುತ್ತಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಗುಜರಾತಿನಲ್ಲಿ ಕಾಂಗ್ರೆಸ್ಸಿಗೆ ಸೋಲಾಯಿತು, ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಕೈಯಿಂದ ಜಾರಿತು. ಅಷ್ಟೇ ಏಕೆ, ಮೊನ್ನೆಯಷ್ಟೇ ನಡೆದ ತ್ರಿಪುರಾ, ನಾಗಾಲೆಂಡ್, ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಅಪಾರ ಹಿನ್ನಡೆಯಾಯಿತು. ಒಟ್ಟಿನಲ್ಲಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದತ್ತ ದೇಶ ಮುನ್ನಡೆಯುತ್ತಿದೆ ಎಂಬುದೂ ಖಾತ್ರಿಯಾಯಿತು.

ಆದರೆ ಹೀಗೆ, ಕಾಂಗ್ರೆಸ್ ಸಾಲು ಸಾಲು ಚುನಾವಣೆಗಳಲ್ಲಿ ಸೋತು ಸುಣ್ಣವಾಗುತ್ತಿರುವುದು ರಾಹುಲ್ ಗಾಂಧಿಯವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆಯೇ? ಈ ಸೋಲಿನಿಂದ ರಾಹುಲ್ ಹತಾಶರಾಗಿದ್ದಾರೆಯೇ? ತಮ್ಮ ಮೇಲೆಯೇ ತಾವು ನಂಬಿಕೆ ಕಳೆದುಕೊಂಡಿದ್ದಾರೆಯೇ ಎಂಬ ಅನುಮಾನ ಕಾಡಲು ಶುರುವಾಗಿದೆ.

ಅದಕ್ಕೆ ಕಾರಣಗಳೂ ಇವೆ, ತ್ರಿಪುರಾ, ನಾಗಾಲೆಂಡ್ ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಕೂಡಲೇ ರಾಹುಲ್ ಗಾಂಧಿಯವರು ಇಟಲಿ ಪ್ರವಾಸ ಮಾಡಿದರು. ಎಲ್ಲರೂ ಸೋಲಿನಿಂದ ಹತಾಶರಾಗಿಯೇ ರಾಹುಲ್ ಗಾಂಧಿ ಇಟಲಿ ಪ್ರವಾಸ ಮಾಡಿದ್ದಾರೆ ಎಂದು ಸಹ ಟೀಕಿಸಿದರು.

ಇಂತಹ ಟೀಕೆಗೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ಇಟಲಿಯಿಂದ ಆಗಮಿಸಿರುವ ರಾಹುಲ್ ಗಾಂಧಿ ಇಂದಿನಿಂದ (ಮಾ.8) ಮಾರ್ಚ್ 12ರವರೆಗೆ ಸಿಂಗಾಪುರ ಹಾಗೂ ಮಲೇಷ್ಯಾ ಪ್ರವಾಸ ಕೈಗೊಂಡಿದ್ದು, ರಾಹುಲ್ ಸೋಲಿನಿಂದ ಕಂಗೆಟ್ಟು ಹೀಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search